ಬ್ರೇಕಿಂಗ್ ನ್ಯೂಸ್
12-06-23 10:22 pm Mangalore Correspondent ಕಾಲೇಜು ಕ್ಯಾಂಪಸ್
ಮಂಗಳೂರು, ಜೂನ್ 12: ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಆಯೋಜಿಸಿದ್ದ ಬಿ.ಪಿ.ಎಲ್ ಕ್ರಿಕೆಟ್ ಪಂದ್ಯಾವಳಿ ಪದುವಾ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ಜರಗಿತು. ಪಂದ್ಯಾವಳಿಯನ್ನು ಬೆಸೆಂಟ್ ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಸತೀಶ ಕುಮಾರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಬೆಸೆಂಟ್ ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ.ಲಕ್ಷೀನಾರಾಯಣ ಭಟ್, ಸಂಘದ ಮಾಜಿ ಸಲಹೆಗಾರರಾದ ಗಣಪತಿ ಭಟ್ ಎಂ, ಡಾ. ವಾಸಪ್ಪಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್, ಕಾರ್ಯದರ್ಶಿ ಪ್ರಣವ್ ಗಣೇಶ್. ಕ್ರೀಡಾ ಕಾರ್ಯದರ್ಶಿ ಮನೀಷ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




ಪಂದ್ಯಾವಳಿಯಲ್ಲಿ ಆರು ತಂಡಗಳಾದ ಟೀಮ್ ವಿಕ್ಟರಿ, ಟೀಮ್ ಬ್ಲೂ ಸ್ಟ್ರೀಕ್, ಟೀಮ್ ಡಾಮಿನೇಟ್, ಟೀಮ್ ಮಾಂಕ್, ಆರೇಜ್ ಆರ್ಮಿ ಮತ್ತು ಟೀಮ್ ಮಾನ್ಸ್ಟರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ವಿಜೇತ ತಂಡಗಳಿಗೆ ಹಾಗೂ ಸರಣಿ ಶ್ರೇಷ್ಠ ಕ್ರೀಡಾಪಟುಗಳಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿತ್ತು. ದಿನವಿಡೀ ನಡೆದ ಲೀಗ್ ಸ್ಪರ್ಧೆಯಲ್ಲಿ ಲೋಹಿತ್ ಬಜಾಲ್ ಮಾಲಕತ್ವದ ಆರೇಜ್ ಆರ್ಮಿ ತಂಡವು ಜಯಶಾಲಿಯಾಗಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಗೌರವ್ ಮೊಹ್ಲಿ ಮಾಲಕತ್ವದ ಟೀಮ್ ವಿಕ್ಟರಿ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.



ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಹಳೆ ವಿದ್ಯಾರ್ಥಿ ಉದಯ್ ಆಚಾರ್, ಕಾಲೇಜು ಪ್ರಾಂಶುಪಾಲರಾದ ಡಾ. ಲಕ್ಷೀನಾರಾಯಣ ಭಟ್ ಹಾಗೂ ಎಸ್.ಡಿ.ಎಂ ಉಪನ್ಯಾಸಕರಾದ ಪ್ರವೀಣ ದೆಂಗೋಡಿ ವಿಜೇತರಿಗೆ ಬಹುಮಾನ ವಿತರಿಸಿದರು. ಮದುರಾಜ್ ಅವರು ಸರಣಿ ಶ್ರೇಷ್ಠ, ಅಂಬಾತನಯ ಶ್ರೇಷ್ಠ ದಾಂಡಿಗನಾಗಿ ಹಾಗೂ ಸುನೀಲ್ ಶ್ರೇಷ್ಠ ಎಸೆತಗಾರನಾಗಿ ಪ್ರಶಸ್ತಿ ಪಡೆದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ವಂದಿಸಿದರು. ಪ್ರತೀಶ್ ಗೌರೀಶ್ ಕಾರ್ಯಕ್ರಮ ನಿರೂಪಿಸಿದರು.
Alumni of Besant Evening college host BPL cricket Match 2023 in Mangalore.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm