ಬ್ರೇಕಿಂಗ್ ನ್ಯೂಸ್
27-05-22 08:59 pm Mangalore Correspondent ಕ್ರೈಂ
ಉಳ್ಳಾಲ, ಮೇ 27: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಉಚ್ಚಿಲ ಸಮೀಪ ನಸುಕಿನ ಜಾವ ನಡೆದಿರುವ ರೌಡಿಶೀಟರ್ ಅಜ್ಜಿನಡ್ಕ , ಮುಳ್ಳುಗುಡ್ಡೆ ನಿವಾಸಿ ಆರೀಫ್ (37) ಕೊಲೆಯತ್ನ ಪ್ರಕರಣದ ಐವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಮೇಲಂಗಡಿ ನಿವಾಸಿ ಅಬ್ದುಲ್ ಕರೀಂ(46), ಪೈಝಲ್ನಗರ ನಿವಾಸಿಗಳಾದ ಪುಚ್ಚ ನಿಶಾಕ್(25), ಮೊಹಮ್ಮದ್ ಅಶ್ಪಾಕ್(26), ಕಾಟಿಪಳ್ಳ ನಿವಾಸಿ ಉಮ್ಮರ್ ಫಾರೂಕ್(25), ಮಾರ್ನಮಿಕಟ್ಟೆ ನಿವಾಸಿ ರಿಫಾತ್ (27) ಬಂಧಿತ ಆರೋಪಿಗಳು. ರೌಡಿಶೀಟರ್ ಆರೀಫ್ ಮತ್ತು ಅಬ್ದುಲ್ ಕರೀಂ ಜತೆಯಾಗಿ ವ್ಯವಹಾರ ಮಾಡುತ್ತಿದ್ದು, ಕರೀಂ ಎಂಬಾತ ಆರೀಫ್ ನಿಂದ ಸಾಲ ಪಡೆದುಕೊಂಡಿದ್ದ ಎನ್ನಲಾಗಿದೆ.


ಕೆಲವು ದಿನಗಳ ಹಿಂದೆ ಆರೀಫ್ ಸಾಲ ನೀಡಿದ ಹಣ ವಾಪಸ್ ನೀಡುವಂತೆ ಕರೀಂನಲ್ಲಿ ಕೇಳಿದ್ದ. ಈ ವಿಚಾರವನ್ನು ಕರೀಂ ನೌಫಾಲ್ ಬಳಿ ತಿಳಿಸಿದ್ದ ಎನ್ನಲಾಗಿದೆ. ನೌಫಾಲ್ ಆರೀಫ್ಗೆ ಕರೆ ಮಾಡಿ ಎಲ್ಲಾ ಹಣ ವಾಪಸ್ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದ. ಇದೇ ವಿಚಾರದಲ್ಲಿ ಅವರ ಮಧ್ಯೆ ಸಂಘರ್ಷ ನಡೆದಿದ್ದು, ನೌಫಾಲ್ ತನ್ನ ಸ್ನೇಹಿತರಾದ ನಿಶಾಕ್, ಅಶ್ಪಾಕ್, ಫಾರೂಕ್ ಮತ್ತು ರಿಫಾತ್ ಗೆ ಕೊಲೆ ಮಾಡಲು ಸುಫಾರಿ ನೀಡಿದ್ದ ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಮಂಗಳವಾರ ನಸುಕಿನ ಜಾವ ಆರೋಪಿಗಳು ಆರೀಫ್ ನನ್ನು ಉಚ್ಚಿಲ ಬಳಿ ತಡೆದು ನಿಲ್ಲಿಸಿ ಮಚ್ಚಿನಿಂದ ದಾಳಿ ನಡೆಸಿ ಕೊಲೆಯತ್ನ ನಡೆಸಿದ್ದರು. ಗಂಭೀರ ಗಾಯಗೊಂಡ ಆರೀಫ್ ಆರೋಪಿಗಳ ಕೈಯಿಂದ ತಪ್ಪಿಸಿಕೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ನೌಫಾಲ್ , ತಲ್ಹತ್ ಬಂಧನಕ್ಕೆ ಶೋಧ ಮುಂದುವರಿದಿದೆ.
ಉಳ್ಳಾಲ ; ಹಳೇ ದ್ವೇಷ ತೀರಿಸಲು ರೌಡಿಗೆ ಇರಿದು ಕೊಲೆಯತ್ನ, ನಾಲ್ವರು ದುಷ್ಕರ್ಮಿಗಳಿಂದ ಕುಕೃತ್ಯ
Rowdy stabbed at Ullal, five arrested by Ullal police in Mangalore. Arif was stabbed by miscreants over old revenge near Uchila. The search for another accused is on.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm