ಬ್ರೇಕಿಂಗ್ ನ್ಯೂಸ್
02-06-22 10:27 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: ಅರಣ್ಯ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆ ಒಂದರಲ್ಲಿ ಆಂಧ್ರ ಪ್ರದೇಶ ಮೂಲದ ಈಚರ್ ಲಾರಿಯಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ರಕ್ತಚಂದನ ಮರದ ದಿಮ್ಮಿಗಳನ್ನು ಕಿನ್ನಿಗೋಳಿ ಸಮೀಪದ ಕಿಲ್ಪಾಡಿ ಎಂಬಲ್ಲಿ ವಶಕ್ಕೆ ಪಡೆಯಲಾಗಿದ್ದು ಏಳು ಮಂದಿಯನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶ ರಿಜಿಸ್ಟರ್ ಸಂಖ್ಯೆ ಹೊಂದಿರುವ ಈಚರ್ ಲಾರಿಯಲ್ಲಿ ಬರೋಬ್ಬರಿ 8308 ಕೇಜಿ ತೂಕದ ರಕ್ತಚಂದನ ಮರದ ದಿಮ್ಮಿಗಳನ್ನು ಹುಲ್ಲಿನ ಚೀಲದಲ್ಲಿ ಮುಚ್ಚಿ ಸಾಗಿಸಲಾಗುತ್ತಿತ್ತು. ಅದಕ್ಕೆ ಬೆಂಗಾವಲಾಗಿದ್ದ ತಮಿಳುನಾಡು ರಿಜಿಸ್ಟರ್ ಸಂಖ್ಯೆ ಹೊಂದಿದ್ದ ಮಹೀಂದ್ರಾ ಮೊರಾಜೊ ವಾಹನವನ್ನೂ ವಶಕ್ಕೆ ಪಡೆಯಲಾಗಿದ್ದು, ಎರಡೂ ವಾಹನದಲ್ಲಿದ್ದ ಒಟ್ಟು ಏಳು ಮಂದಿಯನ್ನು ಬಂಧಿಸಲಾಗಿದೆ. ವಶಕ್ಕೆ ಪಡೆದ ರಕ್ತಚಂದನದ ಮೌಲ್ಯ 4.15 ಕೋಟಿ ಆಗಿರುತ್ತದೆ.
ಬಂಧಿತರನ್ನು ಆಲಾಡಿ ರಾಜೇಶ್ ರೆಡ್ಡಿ, ಅನಿಲ್ ಕುಮಾರ್, ಪಾಲ್ ರಾಜ್, ದಿನೇಶ್ ಕುಮಾರ್, ಕುಂಞ ಮಹಮದ್, ಅನಿಲ್ ಕುಮಾರ್, ಶಮೀರ್ ಎಸ್. ಎಂದು ಗುರುತಿಸಲಾಗಿದ್ದು ಒಬ್ಬ ಆರೋಪಿ ಕಾರ್ಯಾಚರಣೆ ಸಂದರ್ಭದಲ್ಲಿ ಪರಾರಿಯಾಗಿದ್ದಾನೆ. ಅರಣ್ಯ ಸಂಚಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಜೂನ್ 1ರಂದು ಕಿಲ್ಪಾಡಿ ಮೂಲಕ ಕೆಂಚನಕೆರೆ ಎಂಬಲ್ಲಿಂದ ಲಾರಿ ಬರುತ್ತಿದ್ದಾಗ ಅಡ್ಡಹಾಕಿದ್ದಾರೆ. ಮರದ ದಿಮ್ಮಿಯನ್ನು ಆಂಧ್ರಪ್ರದೇಶದಿಂದ ಮಂಗಳೂರಿಗೆ ತರಲಾಗುತ್ತಿತ್ತು ಎನ್ನುವ ಮಾಹಿತಿ ಇದೆ. ಅರಣ್ಯಾಧಿಕಾರಿಗಳ ಅಪರೂಪದ ಕಾರ್ಯಾಚರಣೆ ಬಗ್ಗೆ ಮೇಲಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Officials of the forest department have arrested seven people while illegally transporting the red sanders worth Rs 4.15 crore in Kenchana Kere of Kilpadi village of Mangaluru taluk. Officials seized 315 logs of red sanders from the possession of the accused on June 1 at 6 pm.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm