ಬ್ರೇಕಿಂಗ್ ನ್ಯೂಸ್
03-06-22 12:36 pm Mangalore Correspondent ಕ್ರೈಂ
ಬೆಳ್ತಂಗಡಿ, ಜೂನ್ 2: ಧರ್ಮಸ್ಥಳ ಬಳಿಯ ಸೌತಡ್ಕ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಮಹಿಳೆಯ ಕೈಯಲ್ಲಿದ್ದ ಬ್ಯಾಗಿನಿಂದ ಚಿನ್ನಾಭರಣ ಕಳವುಗೈದು ಪರಾರಿಯಾಗಿದ್ದ ಮಹಿಳೆಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಮೂಲದ ಮುಂಬೈನಲ್ಲಿ ನೆಲೆಸಿರುವ ಬಾಲಚಂದ್ರ ಡಿ. ಎಂಬವರು ಕಳೆದ ಎಪ್ರಿಲ್ 22ರಂದು ಪತ್ನಿಯೊಂದಿಗೆ ಸೌತಡ್ಕ ದೇವಸ್ಥಾನಕ್ಕೆ ಆಗಮಿಸಿದ್ದರು. ದೇವರ ದರ್ಶನದ ವೇಳೆ ಪತ್ನಿ ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ, ಯಾರೋ ಹಿಂದೆ ನಿಂತಿದ್ದವರು ಬ್ಯಾಗನ್ನು ಓಪನ್ ಮಾಡಿ ಅದರಲ್ಲಿದ್ದ ಚಿನ್ನದ ಆಭರಣವನ್ನು ಕಳವು ಮಾಡಿದ್ದರು. ಈ ಬಗ್ಗೆ ಬಾಲಚಂದ್ರ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದರು.
ಪೊಲೀಸರು ತನಿಖೆ ನಡೆಸಿ ಆರೋಪಿ ಗದಗ ಜಿಲ್ಲೆಯ ಬೆಟಗೇರಿ ತಾಲೂಕಿನ ಭೀಮವ್ವ ಅಲಿಯಾಸ್ ನಾಗಮ್ಮ (63) ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಕಳವುಗೈದು ತನ್ನ ಊರಿಗೆ ತೆರಳಿ ನೆಲೆಸಿದ್ದ ಮಹಿಳೆಯನ್ನು ಬಂಧಿಸಿ ಕರೆತರಲಾಗಿದೆ. ಆಕೆಯ ಬಳಿಯಿಂದ ಒಂದು ವಜ್ರದ ನೆಕ್ಲೆಸ್, ಎರಡು ಉಂಗುರ, ಕಿವಿಯೋಲೆ ಎರಡು ಜತೆ ಸೇರಿದಂತೆ ಒಟ್ಟು 3 ಲಕ್ಷ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ ಮಹಿಳೆ ಭೀಮವ್ವ ಯಾತ್ರಾಸ್ಥಳಗಳಿಂದ ಕಳವುಗೈಯುವ ಪ್ರವೃತ್ತಿಯವಳಾಗಿದ್ದು, ಮುರುಡೇಶ್ವರ, ಭಟ್ಕಳ, ಸುಬ್ರಹ್ಮಣ್ಯ ಮುಂತಾದ ಕಡೆ ಕಳವುಗೈದ ಬಗ್ಗೆ ಕೇಸುಗಳಿವೆ. ಆರೋಪಿಯನ್ನು ಪಿಎಸ್ಐ ಕೃಷ್ಣಕಾಂತ್ ಪಾಟೀಲ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
A Belthangady-based Mumbai resident Balachandra D accompanied by his family had visited Ganapathi temple, Kokkada village here to worship the deity. They were standing in the line to receive Theertha prasada. Meanwhile, someone had stolen their purse containing the jewellery of his wife, after opening the zip of her bag. A case under registration No. 30/2022 under IPC section 379 about the theft was registered at Dharmasthala police station on the basis of complaint on April 20 this year.
27-06-25 10:42 pm
HK News Desk
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm