ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
12-08-26 11:37 am
HK News Staffer
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:32 am
HK News Staffer
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm