ಬ್ರೇಕಿಂಗ್ ನ್ಯೂಸ್
04-06-22 06:19 pm Mangalore Correspondent ಕ್ರೈಂ
ಪುತ್ತೂರು, ಜೂನ್ 4: ಹಿಂದು ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚರಣ್ ರಾಜ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಕಡಿದು ಹತ್ಯೆ ಮಾಡಿದ್ದಾರೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರ್ಲಂಪಾಡಿಯಲ್ಲಿ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಆರ್ಯಾಪು ನಿವಾಸಿ ಚರಣ್ ರಾಜ್, ಪೆರ್ಲಂಪಾಡಿಯ ಮೇಲಿನ ಪೇಟೆಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಸಿದ್ಧತೆ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಅಂಗಡಿಯಲ್ಲಿದ್ದುಕೊಂಡು ವ್ಯವಸ್ಥೆ ಮಾಡುತ್ತಿದ್ದಾಗಲೇ ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಕಡಿದು ಹೋಗಿದ್ದಾರೆ. ಸ್ವಲ್ಪ ಹೊತ್ತು ನೆಲದಲ್ಲಿ ಬಿದ್ದು ಹೊರಳಾಡಿದ ಚರಣ್ ರಾಜ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

2019ರ ಸೆ.4 ರಂದು ರಾತ್ರಿ ಗಣೇಶೋತ್ಸವ ಸಡಗರದಲ್ಲಿದ್ದ ಹಿಂಜಾವೇ ಮುಖಂಡ ಕಾರ್ತಿಕ್ ಮೇರ್ಲ ಅವರನ್ನು ತಂಡವೊಂದು ಹಳೆ ದ್ವೇಷದಿಂದ ಕಡಿದು ಹತ್ಯೆಗೈದಿತ್ತು. ಇದರಲ್ಲಿ ಸೋದರರಾದ ಚರಣ್ ಮತ್ತು ಕಿರಣ್ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಒಂದು ವರ್ಷ ಕಾಲ ಜೈಲಿನಲ್ಲಿದ್ದ ಇವರು ಬಳಿಕ ಜಾಮೀನು ಪಡೆದು ಹೊರಬಂದಿದ್ದರು. ಇದೀಗ ತನ್ನ ಪತ್ನಿ ಮನೆಯಿದ್ದ ಪೆರ್ಲಂಪಾಡಿಯಲ್ಲಿ ಮೆಡಿಕಲ್ ವ್ಯವಹಾರ ಆರಂಭಿಸಲು ಚರಣ್ ಸಿದ್ಧತೆ ನಡೆಸಿದ್ದ. ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರಕ್ಕಾಗಿ ಕಾದಿದ್ದ ಹಂತಕರು ಇಂದು ಮಧ್ಯಾಹ್ನ ಶಾಪ್ ನಲ್ಲಿ ಒಬ್ಬಂಟಿಯಾಗಿದ್ದಾಗಲೇ ಬಂದು ಹತ್ಯೆ ಮಾಡಿದ್ದಾರೆ.
Puttur Murder of Hindu Jagaran Vedike leader Karthik Merla, prime accused Charan Raj killed over revenge in broad daylight.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 05:07 pm
HK News Staffer
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm