ಬ್ರೇಕಿಂಗ್ ನ್ಯೂಸ್
04-06-22 09:31 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಇಎಸ್ಐ ಪಣಂಬೂರು ವಿಭಾಗದ ಡಿಸ್ಪೆನ್ಸರಿ ಘಟಕದಲ್ಲಿ ಫಾರ್ಮಸಿಸ್ಟ್ ಆಗಿದ್ದುಕೊಂಡು ಕಾರ್ಮಿಕರ ಚಿಕಿತ್ಸೆಗೆ ಹಣ ಪಾವತಿಸಲು ಲಂಚ ಕೇಳಿದ ಆರೋಪದಲ್ಲಿ ಅಧಿಕಾರಿಯೊಬ್ಬರನ್ನು ಎಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವಿಷ್ಣುಮೂರ್ತಿ ಭಟ್ ಎಸಿಬಿ ಬಲೆಗೆ ಬಿದ್ದ ಫಾರ್ಮಸಿ ಅಧಿಕಾರಿ. ಪ್ರಕರಣದಲ್ಲಿ ಎಸಿಬಿಗೆ ದೂರು ನೀಡಿದ್ದ ಪ್ರಶಾಂತ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿದ್ದು ಬೇಕರಿ ಒಂದರಲ್ಲಿ ನೌಕರಿಯಾಗಿದ್ದ ಪತ್ನಿಯ ಇಎಸ್ಐ ಸೌಲಭ್ಯ ಬಳಸಿಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆನಂತರ, ಖಾಸಗಿ ವೈದ್ಯರು ಬರೆದುಕೊಟ್ಟಿದ್ದ ಔಷಧಿ ಚೀಟಿಯಲ್ಲಿದ್ದ ಔಷಧಿಗಳು ಇಎಸ್ಐ ಡಿಸ್ಪೆನ್ಸರಿ ಘಟಕದಲ್ಲಿ ಸಿಕ್ಕಿರಲಿಲ್ಲ. ಹಾಗಾಗಿ ಬೇರೆ ಖಾಸಗಿ ಮೆಡಿಕಲ್ ನಿಂದ ಔಷಧಿಯನ್ನು ಪಡೆದುಕೊಂಡಿದ್ದರು.
ಆನಂತರ, ಔಷಧಿಯ ಬಿಲ್ ಮೊತ್ತವನ್ನು ಇಎಸ್ಐ ಡಿಸ್ಪೆನ್ಸರಿ ವಿಭಾಗಕ್ಕೆ ಕೊಟ್ಟು ಅಲ್ಲಿಂದ ಹಣವನ್ನು ಇಎಸ್ಐ ಸೌಲಭ್ಯ ಹೊಂದಿದ್ದ ಮಹಿಳೆಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕಿತ್ತು. ಆದರೆ, ಬಿಲ್ ಮೊತ್ತವನ್ನು ಪಾವತಿ ಮಾಡಬೇಕಿದ್ದಲ್ಲಿ ಎರಡು ಸಾವಿರ ರೂಪಾಯಿ ಲಂಚ ನೀಡುವಂತೆ ಅಲ್ಲಿನ ಅಧಿಕಾರಿ ಕೇಳಿದ್ದರು. ಈ ಬಗ್ಗೆ ಪ್ರಶಾಂತ್ ಕುಮಾರ್ ಎಸಿಬಿಗೆ ದೂರು ನೀಡಿದ್ದು, ಶನಿವಾರ ಮಧ್ಯಾಹ್ನ ಪೊಲೀಸರ ಸೂಚನೆಯಂತೆ ಹಣವನ್ನು ನೀಡುತ್ತಿದ್ದಾಗಲೇ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಇನ್ಸ್ ಪೆಕ್ಟರ್ ಶ್ಯಾಮಸುಂದರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
Sleuths of the Anti-Corruption Bureau (ACB) apprehended a staff of ESI Hospital in Panambur accepting a bribe for releasing money to a patient.
The arrested has been identified as Vishnumurthi, who works as a senior pharmacist at the ESI Hospital in Panambur.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 05:07 pm
HK News Staffer
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm