ಬ್ರೇಕಿಂಗ್ ನ್ಯೂಸ್
06-06-22 09:58 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 6: ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬೆನ್ನತ್ತಿ ನ್ಯಾಯ ಕೊಡಿಸಬೇಕಾದ ಪೊಲೀಸ್ ಅಧಿಕಾರಿಯ ವಿರುದ್ಧ ಆತನ
ಪತ್ನಿಯೇ ಪೊಲೀಸ್ ದೂರು ನೀಡಿದ್ದು, 13 ವರ್ಷದ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಬೆಂಗಳೂರಿನ ಜೆಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಹಿಳೆ ಜೆಸಿ ನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿರುವ ತನ್ನ ಗಂಡನ ವಿರುದ್ಧ ದೂರು ನೀಡಿದ್ದಾರೆ. ವಿಚಿತ್ರ ಅಂದರೆ, ಆರೋಪಿ ಪೊಲೀಸ್ ಅಧಿಕಾರಿ ದೂರು ನೀಡಿರುವ ಮಹಿಳೆಯ ಎರಡನೇ ಗಂಡನಾಗಿದ್ದಾನೆ. ಸದ್ಯಕ್ಕೆ ಆರೋಪಿ ಎಸೈ ವಿರುದ್ಧ ಪೋಕ್ಸೋ ಮತ್ತು ಅತ್ಯಾಚಾರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದಲ್ಲದೆ, ತನ್ನ ಜೊತೆಗೂ ಅನೈಸರ್ಗಿಕ ಲೈಂಗಿಕ ಚಟುವಟಿಕೆ ನಡೆಸಲು ಒತ್ತಾಯ ಮಾಡುತ್ತಾನೆಂದು ಮಹಿಳೆ ದೂರಿದ್ದಾರೆ.
ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು, ಮೊದಲ ಪತಿ ಕಿರುಕುಳ ನೀಡುತ್ತಿದ್ದ ಬಗ್ಗೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಠಾಣೆಯಲ್ಲಿ ಹೇಳಿಕೆಯನ್ನು ದಾಖಲಿಸಲು ಹೋಗಿದ್ದಾಗ, ಅಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬ ಪರಿಚಯ ಆಗಿದ್ದ. ಪರಿಚಯ ಸ್ನೇಹಕ್ಕೆ ತಿರುಗಿದ್ದು ಮಹಿಳೆಗೆ ಮೊದಲ ಪತಿಯಿಂದ ವಿಚ್ಚೇದನ ಸಿಕ್ಕಿದ ಬಳಿಕ ಪೊಲೀಸ್ ಅಧಿಕಾರಿಯೇ ಈಕೆಯನ್ನು ಮದುವೆಯಾಗಿದ್ದ. ಪೊಲೀಸ್ ಅಧಿಕಾರಿಯೂ ಮೊದಲ ಪತ್ನಿಯಿಂದ ವಿಚ್ಚೇದನ ಪಡೆದಿದ್ದ ಕಾರಣ, ಇಬ್ಬರೂ ಜೊತೆಯಾಗಿದ್ದರು.
ಮಹಿಳೆಗೆ ಮೊದಲ ಪತಿಯ ಜೊತೆಗಿನ ಜೀವನದಲ್ಲಿ ಹೆಣ್ಣು ಮಗುವಾಗಿದ್ದು, ಈಗ ಆಕೆಗೆ 13 ವರ್ಷ ತುಂಬಿದೆ. ಜೊತೆಗೆ, ಮಹಿಳೆ ಇನ್ನೊಬ್ಬ ಸ್ವಂತ ತಂಗಿಯನ್ನೂ ಹೊಂದಿದ್ದಾಳೆ. ಕಾಮುಕ ಪೊಲೀಸ್ ಅಧಿಕಾರಿ 13 ವರ್ಷದ ಮಗಳು ಮತ್ತು ಪತ್ನಿಯ ತಂಗಿಯ ಮೇಲೆ ಕಣ್ಣು ಹಾಕಿದ್ದು, ಪತ್ನಿಯ ಕಣ್ಣು ತಪ್ಪಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಸರಿಯಾಗಿಯೇ ಇದ್ದ ಪತಿ, ಈಗ ವಿಕೃತ ಕಾಮ ಪೂರೈಸಿಕೊಳ್ಳಲು ಮುಂದಾಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Bangalore Police inspector alleged of raping his 13-year-old daughter, wife files complaint at J J Nagar Police Station. The wife who has lodged a complaint against the inspector is said to be his second wife.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm