ಬ್ರೇಕಿಂಗ್ ನ್ಯೂಸ್
07-06-22 10:22 pm HK News Desk ಕ್ರೈಂ
ಹುಬ್ಬಳ್ಳಿ, ಜೂನ್ 7 : ಬಿಕಾಂ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದು ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ಶಿಗ್ಗಾವಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಶಿಗ್ಗಾವಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಈ ಆರೋಪ ಕೇಳಿಬಂದಿದೆ. ನಿಂಗಪ್ಪ ಕಲಕೋಟಿ ಎಂಬ ಪ್ರಾಧ್ಯಾಪಕ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿ. ಮನೆ ಪಾಠ ಹೇಳಿಕೊಡುವುದಾಗಿ ತನ್ನ ಮನೆಗೆ ವಿದ್ಯಾರ್ಥಿನಿಯನ್ನು ಕರೆಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಒಂದೂವರೆ ವರ್ಷಗಳಿಂದ ತನ್ನ ಮೇಲೆ ಏಳೆಂಟು ಬಾರಿ ಸಹಾಯಕ ಪ್ರಾಧ್ಯಾಪಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವಿದ್ಯಾರ್ಥಿನಿ ದೂರಿದ್ದಾಳೆ.
ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕನಾಗಿ ನಿಂಗಪ್ಪ ಕಾರ್ಯ ನಿರ್ವಹಿಸುತ್ತಿದ್ದಾರೆ. ನಿರಂತರ ಲೈಂಗಿಕ ದೌರ್ಜನ್ಯದಿಂದ ವಿದ್ಯಾರ್ಥಿನಿ ಮೂರು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ವಿಷಯ ತಿಳಿದ ಆರೋಪಿ ನಿಂಗಪ್ಪ ವಿದ್ಯಾರ್ಥಿನಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸದ್ಯಕ್ಕೆ ವಿದ್ಯಾರ್ಥಿನಿಯನ್ನ ಹಾವೇರಿ ನಗರದ ಮಹಿಳಾ ಸಾಂತ್ವನ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಆರೋಪಿ ನಿಂಗಪ್ಪ ವಿರುದ್ಧ ಸವಣೂರು ಪೊಲೀಸ್ ಠಾಣೆಯಲ್ಲಿ ಐಪಿಸಿ 376 (2) ಮತ್ತು 506 ಅಡಿ ದೂರು ದಾಖಲಾಗಿದೆ.
Hubbali Teacher booked for sexual harassment of Bcom girl. The arrested has been identified as Ningappa.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm