ಬ್ರೇಕಿಂಗ್ ನ್ಯೂಸ್
08-06-22 03:29 pm HK News Desk ಕ್ರೈಂ
ಮೈಸೂರು, ಜೂ 8: ಜಿಲ್ಲೆಯಲ್ಲಿ ಮರ್ಯಾದಾ ಹತ್ಯೆಯ ಘಟನೆಯೊಂದು ಬೆಳಕಿಗೆ ಬಂದಿದೆ. ಕೆಲವು ವರ್ಷಗಳ ಹಿಂದೆ ಇಂತಹದ್ದೇ ಒಂದು ಘಟನೆ ನಡೆದಿತ್ತು. ಇದೀಗ ಮತ್ತೊಮ್ಮೆ ಮರ್ಯಾದಾ ಹತ್ಯೆ ನಡೆದಿದ್ದು ಈ ಘಟನೆ ನಾಗರಿಕರ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ.
ಮಗಳು ತಮ್ಮ ಜಾತಿಗಿಂತ ಕೆಳ ವರ್ಗದ ಯುವಕನನ್ನು ಪ್ರೀತಿಸಿದ್ದಲ್ಲದೇ ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದೇ ಆಕೆಯ ಹತ್ಯೆಗೆ ಕಾರಣವಾಗಿದೆ. ಹಾಗಾದರೆ ಇಷ್ಟಕ್ಕೂ ಆಗಿದ್ದೇನು? ಕೊಲೆ ಮಾಡಿದ್ದು ಏಕೆ? ಕೊಲೆಯಾದ ಯುವತಿ ಯಾರು? ಎಂಬಿತ್ಯಾದಿ ವಿಚಾರಗಳನ್ನು ಕಲೆಹಾಕುತ್ತಾ ಹೋದರೆ ಮರ್ಯಾದಾ ಹತ್ಯೆ ಹಿಂದಿನ ಭಯಾನಕತೆ ಎದ್ದು ಕಾಣುತ್ತದೆ.
ಒಂದು ವೇಳೆ ಮಗಳು ತನ್ನ ಮಾತನ್ನು ಧಿಕ್ಕರಿಸಿ ತಾನು ಪ್ರೀತಿಸಿದವನನ್ನೇ ಮದುವೆಯಾಗುವುದಾಗಿ ಹಠ ಹಿಡಿದ ವೇಳೆ ಆಕೆಯನ್ನು ಅವಳ ಪಾಡಿಗೆ ಬಿಟ್ಟು ಬಿಟ್ಟಿದ್ದರೂ ಆಕೆಯ ಜೀವ ಉಳಿಯುತ್ತಿತ್ತಲ್ಲದೆ ಮಗಳನ್ನು ಕೊಂದು ಜೈಲು ಸೇರುವ ಪ್ರಮೇಯ ಹೆತ್ತವರಿಗೆ ಬರುತ್ತಿರಲಿಲ್ಲ.ಆದರೆ ಆಗಿದ್ದೇ ಬೇರೆ.
ಅನ್ಯಜಾತಿಯ ಯುವಕನನ್ನು ಪ್ರೀತಿಸಿದ ತಪ್ಪಿಗೆ ಹೆಣವಾಗಿ ಹೋದ ಯುವತಿ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ನಿವಾಸಿ ಸುರೇಶ್ ಹಾಗೂ ಬೇಬಿ ದಂಪತಿಯ ಪುತ್ರಿ. ಪಿರಿಯಾಪಟ್ಟಣದ ಕಾಲೇಜೊಂದರಲ್ಲಿ ಓದುವ ವಯಸ್ಸಿನಲ್ಲಿ ಪ್ರೀತಿ ಪ್ರೇಮದ ಬಲೆಗೆ ಬಿದ್ದ ಈಕೆ, ತಮ್ಮ ಗ್ರಾಮಕ್ಕೆ ಸಮೀಪವಿರುವ ಮೆಲ್ಲಹಳ್ಳಿ ಬೋರೆ ಗ್ರಾಮದ ಪರಿಶಿಷ್ಟ ಜನಾಂಗಕ್ಕೆ ಸೇರಿದ ಮಂಜು ಎಂಬ ಯುವಕನನ್ನು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದಳು.
ಮಗಳು ಓದುವ ವಯಸ್ಸಿನಲ್ಲಿ ಪ್ರೀತಿಯ ಬಲೆಗೆ ಬಿದ್ದ ವಿಷಯ ತಿಳಿದ ಪೋಷಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಆಕೆ ಆತನನ್ನೇ ಮದುವೆಯಾಗುವುದಾಗಿ ಹಠ ಹಿಡಿದ ವೇಳೆ ಪಟ್ಟಣದ ಪೊಲೀಸ್ ಠಾಣೆಗೆ ಯುವಕನ ವಿರುದ್ಧ ದೂರು ನೀಡಿದ್ದರು. ಆ ಸಮಯದಲ್ಲಿ ಯುವತಿ ಆತನನ್ನೇ ಪ್ರೀತಿಸುವುದಾಗಿ ಪೊಲೀಸರಿಗೆ ಹೇಳಿಕೆ ನೀಡಿದ್ದಳು. ಆದರೆ ಆಕೆಗೆ 18 ವರ್ಷ ತುಂಬಿರದ ಕಾರಣ ಪೊಲೀಸರು ಮೈಸೂರಿನ ಬಾಲಮಂದಿರಕ್ಕೆ ಕಳುಹಿಸಿದ್ದರು.
ಆದರೆ ಕಳೆದ ಕೆಲವು ದಿನಗಳ ಹಿಂದೆ ಯವತಿ ತನ್ನ ಪೋಷಕರಿಗೆ ಕರೆ ಮಾಡಿ ಇಲ್ಲಿಂದ ಕರೆದುಕೊಂಡು ಹೋಗುವಂತೆ ಹೇಳಿದ್ದಾಳೆ. ಹೀಗಾಗಿ ಮಗಳ ಮನಸ್ಸು ಬದಲಾಯಿಸಿದ್ದು, ಇನ್ನು ಮುಂದೆ ಸರಿಹೋಗಬಹುದೆಂದು ನಂಬಿ ಪೋಷಕರು ಬಾಲಮಂದಿರಕ್ಕೆ ಒಪ್ಪಿಗೆ ಪತ್ರ ಬರೆದುಕೊಟ್ಟು ತಮ್ಮ ಮಗಳನ್ನು ಸ್ವಗ್ರಾಮಕ್ಕೆ ಕರೆತಂದಿದ್ದರು.
ಸೋಮವಾರ ರಾತ್ರಿ ಮತ್ತೆ ತನ್ನ ಪೋಷಕರೊಂದಿಗೆ ಪ್ರೀತಿಸುತ್ತಿದ್ದ ಹುಡುಗನೊಂದಿಗೆ ಹೋಗುವುದಾಗಿ ಹಠ ಮಾಡಿ ಕುಳಿತಾಗ ಆಕೆಯ ತಂದೆ ಸುರೇಶ್ ಒಪ್ಪಲಿಲ್ಲ. ಮಗಳ ಕತ್ತು ಹಿಸುಕಿ ಕೊಲೆ ಮಾಡಿ ತನ್ನ ಪತ್ನಿ ಬೇಬಿಯೊಂದಿಗೆ ಸೇರಿ ಆಕೆ ಪ್ರೀತಿಸುತ್ತಿದ್ದ ಹುಡುಗನ ಗ್ರಾಮದ ಜಮೀನೊಂದರ ಬಳಿ ಎಸೆದು ಹೋಗಿದ್ದಾರೆ.
ಬಳಿಕ ಮಂಗಳವಾರ ಬೆಳಿಗ್ಗೆ 6.30 ರ ಸಮಯದಲ್ಲಿ ಸುರೇಶ್ ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಬಂದು ಮಗಳನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡು ಪೊಲೀಸರ ಮುಂದೆ ಶರಣಾಗಿದ್ದಾನೆ. ಆರೋಪಿ ಹೇಳಿಕೆ ಆಧರಿಸಿ ಪೊಲೀಸರು ಸ್ವ ವರದಿ ದಾಖಲಿಸಿಕೊಂಡು ಆರೋಪಿ ಸುರೇಶನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್, ಅಪರ ಎಸ್ಪಿ ಶಿವಕುಮಾರ್, ಡಿವೈಎಸ್ ಪಿ ರವಿಪ್ರಸಾದ್, ಸಿಪಿಐ ಗಳಾದ ಜಗದೀಶ್, ಪ್ರಕಾಶ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
Mysuru Dalit girl brutally killed by patents for loving boy of lower caste.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm