ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
12-08-26 11:37 am
HK News Staffer
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:32 am
HK News Staffer
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm