ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm