ಬ್ರೇಕಿಂಗ್ ನ್ಯೂಸ್
09-06-22 03:09 pm HK News Desk ಕ್ರೈಂ
ಮೈಸೂರು, ಜೂನ್ 9: ಮೈಸೂರಿನ ಕಾನ್ವೆಂಟ್ ಶಾಲೆಯ ನನ್ ಒಬ್ಬರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಬಗ್ಗೆ ನನ್ ಆಗಿರುವ ಯುವತಿಯೇ ಸ್ವತಃ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತನ್ನ ಶವ ಏನಾದ್ರೂ ಸಿಕ್ಕರೆ ಕೊಲೆಯೆಂದು ಕೇಸು ದಾಖಲಿಸುವಂತೆ ಕೋರಿದ್ದಾರೆ.
ವಿಕಲ ಚೇತನ ಮಕ್ಕಳನ್ನು ಸಾಕುವ ಕಾನ್ವೆಂಟ್ ಶಾಲೆಯಲ್ಲಿ ನನ್ ಟೀಚರ್ ಆಗಿದ್ದು, ಅಲ್ಲಿನ ಸಿಬಂದಿಯೇ ತನ್ನ ಮೇಲೆ ಕಿರುಕುಳ ನೀಡಿದ್ದಾರೆ. ಈ ಹಿಂದೆ ಅಲ್ಲಿ ಎರಡು ಕೊಲೆ ಆಗಿದೆ. ಅಮಾಯಕರಿಗೆ ಲೈಂಗಿಕ ಕಿರುಕುಳ ನೀಡಲಾಗ್ತಿದೆ. ಭಾರೀ ಭ್ರಷ್ಟಾಚಾರವೂ ನಡೆಯುತ್ತಿರುವುದಾಗಿ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಅಲ್ಲದೆ, ತನ್ನನ್ನು ಮಾನಸಿಕ ರೋಗಿಯೆಂದು ತೋರಿಸಿ ಆಸ್ಪತ್ರೆಗೆ ದಾಖಲಿಸಲು ಯತ್ನಿಸುತ್ತಿದ್ದಾರೆ. ಇದರಲ್ಲಿ ಕಾನ್ವೆಂಟ್ ಶಾಲೆಯ ಮೂವರು ಮಹಿಳಾ ಸಹೋದ್ಯೋಗಿಗಳ ಪಾತ್ರ ಇದೆಯೆಂದು ಹೇಳಿ, ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ. ನನಗೆ ಮಾನಸಿಕ ಕಿರುಕುಳವನ್ನೂ ನೀಡುತ್ತಿದ್ದು, ನನ್ನ ಶವ ಎಲ್ಲಿಯಾದರೂ ಸಿಕ್ಕರೆ ಅದನ್ನು ಪೊಲೀಸರು ಕೊಲೆಯೆಂದು ಪರಿಗಣಿಸಬೇಕು ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ರಾಜ್ಯ ಮಾನವ ಹಕ್ಕು ಆಯೋಗಕ್ಕೂ ಈ ಬಗ್ಗೆ ಪತ್ರ ಬರೆದಿದ್ದೇನೆ ಎಂದು ಹೇಳಿರುವ ಆಕೆ, ತನ್ನ ಮೇಲೆ ನಾಲ್ವರು ಸೇರಿ ಹಲ್ಲೆ, ಕಿರುಕುಳ ನೀಡಿದ್ದು ಆನಂತರ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹೇಗೋ ಪಾರಾಗಿ ಬಂದು ಪೊಲೀಸರಿಗೆ ದೂರು ನೀಡಿದ್ದೇನೆ ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ. ಕಾನ್ವೆಂಟ್ ಶಾಲೆಯ ಆಡಳಿತ ಈ ಆರೋಪಗಳನ್ನು ನಿರಾಕರಿಸಿದ್ದು, ಆಕೆ ಮಾನಸಿಕ ಅಸ್ವಸ್ಥಳಾಗಿದ್ದು, ಎರಡು ತಿಂಗಳಿಂದ ವಿಪರೀತವಾಗಿ ವರ್ತಿಸುತ್ತಿದ್ದಾಳೆ ಎಂದು ಹೇಳಿಕೆ ನೀಡಿದೆ.
A nun working in Mercy convent in Sri Rampura in Karnataka's Mysuru has sought protection from her colleagues, alleging that her life is in danger and that she was forcibly admitted to a psychiatric hospital for calling out sexual harassment in the convent.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm