ಬ್ರೇಕಿಂಗ್ ನ್ಯೂಸ್
09-06-22 09:20 pm HK News Desk ಕ್ರೈಂ
ಕಾರವಾರ, ಜೂನ್ 9: ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ರೂಪದಲ್ಲಿ ತರುತ್ತಿದ್ದ ಎರಡು ಕೋಟಿ ರೂ. ನಗದನ್ನು ರೈಲ್ವೇ ಪೊಲೀಸರು ಕಾರವಾರದಲ್ಲಿ ಪತ್ತೆ ಮಾಡಿದ್ದಾರೆ.
ರೈಲು ಸಂಖ್ಯೆ - 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ರೈಲ್ವೇ ಟಿಕೆಟ್ ಪರೀಕ್ಷಕರು ವಿಚಾರಿಸಿದರೂ ಸರಿಯಾಗಿ ಉತ್ತರಿಸದೇ ಇದ್ದಾಗ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಕಾರವಾರ ನಿಲ್ದಾಣಕ್ಕೆ ಬಂದಾಗ ವ್ಯಕ್ತಿಯ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದ್ದು, ಅದರಲ್ಲಿ ಬರೋಬ್ಬರಿ 2 ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಪ್ರಕರಣಕ್ಕೆ ಸಂಬಂಧಿಸಿ 22 ವರ್ಷದ ಚೇನ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ರಾಜಸ್ಥಾನದ ಜಲೋರ್ ನಗರದ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಗ್ ತೆರೆಯಲು ಹೇಳಿದಾಗ, ಮೊದಲು ನಿರಾಕರಿಸಿದ್ದು ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ, ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನಕ್ಕೆ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನ ರಾಜ್ ಎನ್ನುವವರಿಗೆ ತಲುಪಿಸಲು ಒಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾನೆ.
ಜಪ್ತಿಪಡಿಸಿದ ರೂ. 2 ಕೋಟಿ ರೂಪಾಯಿ ನಗದನ್ನು ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಅದೇ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
Karwar Hawala via train from Mumbai to Mangalore, two crores money seized, youth arrested. The arrested has been identified as Chin Sing (22).
27-06-25 02:46 pm
HK News Desk
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಪ್ರಕರಣಗಳು ; 22ರ...
26-06-25 10:37 pm
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm