ಬ್ರೇಕಿಂಗ್ ನ್ಯೂಸ್
10-06-22 08:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 10: ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿದರೆ, ಕೆಲವೇ ದಿನಗಳಲ್ಲಿ ಡಬಲ್ ಆಗುತ್ತದೆ, ಗರಿಷ್ಠ ಲಾಭ ಬರುತ್ತದೆಯೆಂದು ಹೇಳಿ ಮಹಿಳೆ ಮತ್ತು ಆಕೆಯ ಮಗಳನ್ನು ಯಾಮಾರಿಸಿ 45 ಲಕ್ಷದ 50 ಸಾವಿರ ರೂಪಾಯಿ ಪೀಕಿಸಿದ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರೀನ್ ವಿಲ್ ವಾಸ್, ಲಾವಣ್ಯ, ರೊನಾಲ್ಡ್ ಮತ್ತು ಮೆಲಿಸಾ ಪಿರೇರಾ ವಂಚನೆ ಎಸಗಿದ ಆರೋಪಿಗಳು ಎಂಬುದಾಗಿ ತಾಯಿ, ಮಗಳು ದೂರಿನಲ್ಲಿ ತಿಳಿಸಿದ್ದಾರೆ. ಮದುವೆ ಸಮಾರಂಭ ಒಂದರಲ್ಲಿ ಮೆಲಿಸಾ ಪಿರೇರಾ ಭೇಟಿಯಾಗಿದ್ದು, ಅದೇ ಸಂದರ್ಭದಲ್ಲಿ ಗ್ರೀನ್ ವಿಲ್ ವಾಸ್ ನನ್ನು ಪರಿಚಯ ಮಾಡಿಸಿದ್ದರು.
ಗ್ರೀನ್ ವಿಲ್ ಮುಂಬೈ ನಗರದ ಮೀರಾ ರೋಡ್ ನಲ್ಲಿ ಗೋಲ್ಡ್ ಹಿಲ್ ಸ್ಟಾಕ್ ಟ್ರೇಡಿಂಗ್ ಸೆಂಟರಿನಲ್ಲಿ ಕೆಲಸ ಮಾಡುತ್ತಿರುವುದಾಗಿ ನಂಬಿಸಿದ್ದಾರೆ. ಅಲ್ಲದೆ, ಸದ್ಯದಲ್ಲೇ ಗೋಲ್ಡ್ ಹಿಲ್ ಸ್ಟಾಕ್ ಎಕ್ಸ್ ಚೇಂಜ್ ಕಚೇರಿ ಮಂಗಳೂರಿನಲ್ಲಿ ಆರಂಭವಾಗಲಿದ್ದು ಅದರ ಸಂಪೂರ್ಣ ಹೊಣೆಯನ್ನು ತಾನೇ ವಹಿಸುವುದಾಗಿ ತಿಳಿಸಿದ್ದಾರೆ.
ಆರೋಪಿಗಳು ಸೇರಿಕೊಂಡು ಗೋಲ್ಡ್ ಹಿಲ್ ಬಗ್ಗೆ ವಿವರಣೆ ನೀಡಿದ್ದು, ಅದರಲ್ಲಿ ಹಣ ಹೂಡಿಕೆ ಮಾಡಿದರೆ ಕೇವಲ 37 ದಿನಗಳಲ್ಲಿ 30 ಶೇಕಡಾ ಹಣ ಬಡ್ಡಿ ರೂಪದಲ್ಲಿ ತಿರುಗಿ ಬರುತ್ತದೆ ಎಂದು ಹೇಳಿದ್ದಾರೆ. ಅದರಂತೆ, ಬಣ್ಣನೆಯ ಮಾತುಗಳನ್ನು ನಂಬಿದ ಮಹಿಳೆಯ ಪುತ್ರಿ ತಾನು ದುಡಿದು ಕೂಡಿಟ್ಟಿದ್ದ 45,50,000 ರೂಪಾಯಿ ಹಣವನ್ನು 2020ರಲ್ಲಿ ವಿವಿಧ ಸಂದರ್ಭಗಳಲ್ಲಿ ಗೋಲ್ಡ್ ಹಿಲ್ ಹೆಸರಲ್ಲಿ ಹೂಡಿಕೆ ಮಾಡಿದ್ದಾರೆ.
ಗ್ರೀನ್ ವಿಲ್ ವಾಸ್ ಸೂಚಿಸಿದ ಬ್ಯಾಂಕು ಖಾತೆಗಳಿಗೆ ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆನಂತರ ಯಾವುದೇ ಬಡ್ಡಿ ಹಣವನ್ನು ನೀಡಲಿಲ್ಲ. ಬಡ್ಡಿ ಬದಲು ಅಸಲನ್ನಾದರೂ ಕೊಡಿ ಎಂದು ದುಂಬಾಲು ಬಿದ್ದರೂ, ಹಣವನ್ನು ಹಿಂತಿರುಗಿಸದೆ ಮೋಸ ಮಾಡಿದ್ದಾರೆ. ಇವರ ಮೋಸದ ಜಾಲದಲ್ಲಿ ಆರೋಪಿಗಳು ಸಹಕಾರ ನೀಡಿದ್ದು, ವಂಚನೆಯಲ್ಲಿ ಶಾಮೀಲಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ದೂರು ದಾಖಲಿಸಿದ್ದರೂ, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಜರುಗಿಸಿಲ್ಲ.
A 57-year-old woman has filed a police complaint against six persons for cheating her and her daughter of Rs 45,50,000 by asking them to invest in the name of Stock Trading Goldhil. The accused are Grenville Vas, Lavanya, Ronald and Melissa Pereira.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 05:07 pm
HK News Staffer
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm