ಬ್ರೇಕಿಂಗ್ ನ್ಯೂಸ್
16-06-22 03:39 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 16: ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯೊಬ್ಬರ ಹೆಸರಲ್ಲಿ ನಕಲಿ ಸಹಿ ಮಾಡಿ ದೈಹಿಕ ಅರ್ಹತಾ ಪತ್ರ ನೀಡಿದ್ದ ಆರೋಪದಲ್ಲಿ ವಿಟ್ಲದ ಯುವಕನೊಬ್ಬ ಜೈಲುಪಾಲಾಗಿದ್ದಾನೆ.
ವಿಟ್ಲ ಸ್ಕೂಲ್ ರಸ್ತೆಯ ನಿವಾಸಿ ಶೇಖ್ ಫಿರೋಜ್ ಆದಂ(26) ವಿಟ್ಲ ಪೊಲೀಸರಿಗೆ ಸಿಕ್ಕಿಬಿದ್ದ ಜೈಲುಪಾಲಾದ ಯುವಕ. ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಡಾ.ವೇದಾವತಿ ಅವರು ನೀಡಿದ್ದ ದೂರಿನಂತೆ ವಿಟ್ಲ ಪೊಲೀಸರು ಕ್ರಮ ಜರುಗಿಸಿದ್ದಾರೆ. ತನ್ನ ಹೆಸರಲ್ಲಿ ಡುಪ್ಲಿಕೇಟ್ ಸೀಲ್ ಮತ್ತು ನಕಲಿ ಸಹಿಯನ್ನು ನೀಡಿದ್ದ ಪೋರ್ಜರಿ ದಾಖಲೆ ಪತ್ರದ ಬಗ್ಗೆ ವೈದ್ಯರು ದೂರು ನೀಡಿದ್ದರು.
ಇಸುಬು ಎಂಬ ವ್ಯಕ್ತಿಯೊಬ್ಬ ತನ್ನ ಡ್ರೈವಿಂಗ್ ಲೈಸನ್ಸ್ ನವೀಕರಣ ಮಾಡುವುದಕ್ಕಾಗಿ ವಿಟ್ಲದಲ್ಲಿರುವ ನೇಶನಲ್ ಡ್ರೈವಿಂಗ್ ಸ್ಕೂಲ್ ಗೆ ಅರ್ಜಿ ಸಲ್ಲಿಸಿದ್ದ. ಲೈಸನ್ಸ್ ನವೀಕರಣ ಮಾಡಲು ಫಿಟ್ನೆಸ್ ಸರ್ಟಿಫಿಕೇಟ್ ಬೇಕಾಗಿದ್ದರಿಂದ ಡ್ರೈವಿಂಗ್ ಸ್ಕೂಲ್ ನಲ್ಲಿ ಸಿಬಂದಿಯಾಗಿದ್ದ ಶೇಖ್ ಫಿರೋಜ್ ಆದಂ ತಾನೇ ಪೋರ್ಜರಿ ದಾಖಲೆಯನ್ನು ಸಿದ್ಧಪಡಿಸಿದ್ದ. ಡ್ರೈವಿಂಗ್ ಸ್ಕೂಲ್ ಕೇಂದ್ರವು ಆರೋಪಿ ಫಿರೋಜ್ ತಂದೆಗೆ ಸೇರಿದ್ದಾಗಿದ್ದು ಅಲ್ಲಿ ದಾಖಲೆ ಪತ್ರಗಳ ಕ್ರೋಡೀಕರಣ ಕೆಲಸವನ್ನು ಆತನೇ ಮಾಡುತ್ತಿದ್ದ.
ಆನಂತರ ಲೈಸನ್ಸ್ ನವೀಕರಣಕ್ಕಾಗಿ ಬಂಟ್ವಾಳ ಆರ್ ಟಿಓ ಕೇಂದ್ರಕ್ಕೆ ಅರ್ಜಿ ರವಾನೆಯಾಗಿತ್ತು. ಪರಿಶೀಲನೆ ನಡೆಸಿದ ಆರ್ ಟಿಓ ಇನ್ ಸ್ಪೆಕ್ಟರ್, ಫಿಟ್ನೆಸ್ ಸರ್ಟಿಫಿಕೇಟ್ ನಲ್ಲಿದ್ದ ಸಹಿಯ ಬಗ್ಗೆ ಸಂಶಯ ಬಂದು ಅದನ್ನು ವೈದ್ಯರ ಪರಿಶೀಲನೆಗೆ ಕಳಿಸಿದ್ದರು. ವೈದ್ಯರು ಚೆಕ್ ಮಾಡಿದಾಗ, ಅದು ತನ್ನದಲ್ಲ ಸಹಿ ಎಂದು ತಿಳಿದು ಸಹಿ ಪೋರ್ಜರಿಯಾಗಿರುವ ಸಂಶಯದಲ್ಲಿ ವಿಟ್ಲ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಇಸುಬುವನ್ನು ಕರೆಸಿ ಮಾಹಿತಿ ಪಡೆದಿದ್ದಾರೆ. ತಾನು ಡ್ರೈವಿಂಗ್ ಲೈಸನ್ಸ್ ನವೀಕರಣಕ್ಕೆ ಅರ್ಜಿ ಸಲ್ಲಿಸಿದ ಬಗ್ಗೆ ಮಾಹಿತಿ ನೀಡಿದ್ದ. ಡ್ರೈವಿಂಗ್ ಸ್ಕೂಲ್ ನಲ್ಲಿ ಸಿಬಂದಿಯನ್ನು ತನಿಖೆಗೆ ಒಳಪಡಿಸಿದಾಗ, ಆರೋಪಿ ಫಿರೋಜ್ ಆದಂ ಸಿಕ್ಕಿಬಿದ್ದಿದ್ದು ಆತನನ್ನು ಕೋರ್ಟಿಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
A person was arrested for forging the signature and stamp of a government doctor and attempting to cheat the authorities. The incident was reported under the Vittal police station. The arrested accused is identified as Sheik Firoz Adam (26), a resident of Vittal school road. The have arrested the accused acting on a complaint filed by Dr Vedavathi of Vittal community health center.
10-11-25 12:22 pm
Bangalore Correspondent
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm