ಬ್ರೇಕಿಂಗ್ ನ್ಯೂಸ್
19-06-22 11:02 am Udupi Correspondent ಕ್ರೈಂ
ಉಡುಪಿ, ಜೂನ್ 19: ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಮತ್ತು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ತಲೆ ತೆಗೆದರೆ 20 ಲಕ್ಷ ಬಹುಮಾನ ಕೊಡುವುದಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಪ್ರಕರಣದಲ್ಲಿ ಪೊಲೀಸರು ಮಂಗಳೂರಿನ ಬಜ್ಪೆ ನಿವಾಸಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಜ್ಪೆ ನಿವಾಸಿ ಮಹಮ್ಮದ್ ಶಫಿ (26) ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ವಿರುದ್ಧ ಮಾರಿಗುಡಿ 6 ಎಂಬ ಹೆಸರಿನ Instagram ಖಾತೆಯಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಬಗ್ಗೆ ಯುವಮೋರ್ಚಾ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಸಚಿನ್ ಸುವರ್ಣ ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ಬೆನ್ನಲ್ಲೇ ಕಾರ್ಕಳ ಉಪ ವಿಭಾಗದ ಎಎಸ್ಪಿ ಎಸ್.ವಿಜಯಪ್ರಸಾದ್, ಸೈಬರ್ ಪೊಲೀಸ್ ಠಾಣೆಯ ಸಿಬಂದಿ ಆಧುನಿಕ ತಂತ್ರಜ್ಞಾನವನ್ನು ಬಳಸಿ ತನಿಖೆ ನಡೆಸಿದಾಗ ಬೆದರಿಕೆ ಪೋಸ್ಟ್ ಹಾಕಿದ್ದು ಬಜ್ಪೆ ನಿವಾಸಿ ಮಹಮ್ಮದ್ ಶಾಫಿ ಎಂದು ಮಾಹಿತಿ ಸಂಗ್ರಹಿಸಿದ್ದರು.
ಆಬಳಿಕ ಉಡುಪಿ ಎಸ್ಪಿ ವಿಷ್ಣುವರ್ಧನ್ ಆರೋಪಿ ಪತ್ತೆಗೆ ಕಾಪು ಸಿಪಿಐ ಪ್ರಕಾಶ್, ಪಿಎಸ್ಐ ಶೈಲ ಡಿ.ಎಂ. ನೇತೃತ್ವದಲ್ಲಿ ತಂಡ ರಚಿಸಿದ್ದು ಆರೋಪಿಯನ್ನು ಬಜ್ಪೆ ತಾರಿಕಂಬಳ ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆ ಸಂದರ್ಭದಲ್ಲಿ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಆರು ತಿಂಗಳ ಹಿಂದೆ ಸ್ನೇಹಿತ ಆಸಿಫ್ ಜೊತೆ ಸೇರಿಕೊಂಡು ಮಾರಿಗುಡಿ ಹೆಸರಲ್ಲಿ ಇನ್ ಸ್ಟಾ ಗ್ರಾಮ್ ಪೇಜ್ ತೆರೆದಿದ್ದಾಗಿ ತಿಳಿಸಿದ್ದಾನೆ. ಅಲ್ಲದೆ, ಯಶಪಾಲ್ ಸುವರ್ಣ ಹಾಗೂ ಪ್ರಮೋದ್ ಮುತಾಲಿಕ್ ತಲೆ ಕಡಿದರೆ 20 ಲಕ್ಷ ಎಂದು ಪೋಸ್ಟ್ ಹಾಕಿದ್ದಾಗಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
One person from Bajpe was arrested by Kaup police in relation to the death threat case to Yashpal Suvarna through an Instagram page by the name Maarigudi_06. The arrested is identified as Mohammed Shafi. He has been sent to 14 days judicial custody. Shafi had posted a death threat message against Yashpal Suvarna and Pramodh Muthalik.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm