ಬ್ರೇಕಿಂಗ್ ನ್ಯೂಸ್
20-06-22 12:11 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 20: ವಿಟ್ಲ ಠಾಣೆ ವ್ಯಾಪ್ತಿಯ ಸಾಲೆತ್ತೂರಿನ ಅಗರಿ ಎಂಬಲ್ಲಿ ಭಾನುವಾರ ಸಂಜೆ 5.30ಕ್ಕೆ ಬಜರಂಗದಳ ಸ್ಥಳೀಯ ಮುಖಂಡನೊಬ್ಬನ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಈ ಬಗ್ಗೆ ದೂರು – ಪ್ರತಿ ದೂರು ದಾಖಲಾಗಿದೆ.
ವಿಟ್ಲ ಪ್ರಖಂಡ ಸಂಚಾಲಕ ಚಂದ್ರಹಾಸ ಎಂಬವರ ಮೇಲೆ ತಂಡವೊಂದು ಹಲ್ಲೆ ನಡೆಸಿದೆ. ಈ ಬಗ್ಗೆ ಚಂದ್ರಹಾಸ ನೀಡಿದ ದೂರಿನಲ್ಲಿ ಪ್ರಶಾಂತ, ತೇಜಸ್, ಗಿರೀಶ್, ಗಣೇಶ್, ಶರತ್, ಧನು, ಮುನ್ನ, ಚೇತನ, ವಿನಿತ, ದಿನೇಶ್, ಶಶಿಕುಮಾರ್ ಹಾಗೂ ಇತರ ಇಬ್ಬರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆಂದು ತಿಳಿಸಿದ್ದಾರೆ. ಚೂರಿಯಿಂದ ಚುಚ್ಚಿ ಕೊಲೆಗೆ ಯತ್ನಿಸಿದ್ದು ಹಲ್ಲೆಗೊಳಗಾದ ಚಂದ್ರಹಾಸ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದಕ್ಕೆದುರಾಗಿ ಸುರತ್ಕಲ್ ಇಡ್ಯಾ ಗ್ರಾಮದ ಪ್ರಶಾಂತ್ ಅಲಿಯಾಸ್ ಪಚ್ಚು (30) ಎಂಬಾತ ವಿಟ್ಲ ಠಾಣೆಯಲ್ಲಿ ಪ್ರತಿದೂರು ನೀಡಿದ್ದು, ತಮ್ಮ ಸಹವರ್ತಿ ಹುಡುಗರ ನಡುವಿನ ವೈಷಮ್ಯದ ಬಗ್ಗೆ ಮಾತನಾಡಲು ಸಾಲೆತ್ತೂರು ಗ್ರಾಮದ ನಾಗೇಶ್ ಎಂಬವರ ಮನೆಯ ಬಳಿಗೆ ಹೋಗಿದ್ದು, ಅಲ್ಲಿ ಚಂದ್ರಹಾಸ, ದೇವದಾಸ ಮತ್ತು ನಾಗೇಶ್ ಇದ್ದರು. ಈ ವೇಳೆ, ಮಾತಿಗೆ ಮಾತು ಬೆಳೆದು ಚಂದ್ರಹಾಸ ಮತ್ತು ದೇವದಾಸ ತನ್ನನ್ನು ಹಿಡಿದು ಕೊಲೆಗೆ ಯತ್ನಿಸಿದ್ದಾರೆ. ಕುತ್ತಿಗೆ ಬೆನ್ನಿಗೆ ಚಾಕುವಿನಲ್ಲಿ ಕೊಯ್ದು ತೀವ್ರ ಹಲ್ಲೆ ಮಾಡಿದ್ದು, ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಅಲ್ಲಿನ ವೈದ್ಯರ ಸೂಚನೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೇಲ್ನೋಟಕ್ಕೆ ಎರಡು ತಂಡಗಳ ನಡುವೆ ಜಗಳ ನಡೆದು ಹೊಡೆದಾಟ ನಡೆದಿರುವ ಸಾಧ್ಯತೆಯಿದೆ. ಇಬ್ಬರಿಗೂ ಹಲ್ಲೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಟ್ಲ ಠಾಣೆಯಲ್ಲಿ ಇತ್ತಂಡಗಳ ದೂರಿನಂತೆ ಪ್ರಕರಣ ದಾಖಲಾಗಿದೆ.
Fight between two groups in Bantwal, Bajrang Dal local leader Chandrahas stabbed. Police are now on search for the accused.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 05:07 pm
HK News Staffer
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm