ಬ್ರೇಕಿಂಗ್ ನ್ಯೂಸ್
23-06-22 03:41 pm HK News Desk ಕ್ರೈಂ
ಮೈಸೂರು, ಜೂನ್ 23 : 21 ವರ್ಷದ ಅರ್ಚಕನೊಬ್ಬ ಶಾಸ್ತ್ರ ಕೇಳಲು ಬಂದ 35 ವರ್ಷದ ಗೃಹಿಣಿಯನ್ನು ಮದುವೆಯಾಗುತ್ತೇನೆಂದು ಹೇಳಿ ಹತ್ತು ದಿನಗಳ ಕಾಲ ಜೊತೆಗಿದ್ದು ಆನಂತರ ಕಾಡಿನಲ್ಲಿ ಬಿಟ್ಟು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಲ್ಲಿನ ಮಹದೇಶ್ವರ ದೇವಸ್ಥಾನಕ್ಕೆ ಮಹಿಳೆ ಶಾಸ್ತ್ರ ಕೇಳಲು ಹೋಗಿದ್ದಾಗ ಅರ್ಚಕ ಪರಿಚಯವಾಗಿದ್ದ. ಆತನ ಮಾತು ಕೇಳಿ ಹತ್ತು ದಿನಗಳ ಹಿಂದೆ ತನ್ನ ಇಬ್ಬರು ಮಕ್ಕಳು, ಗಂಡನನ್ನು ಬಿಟ್ಟು ನಾಪತ್ತೆಯಾಗಿದ್ದಳು. ಬಾಳು ಕೊಡುವುದಾಗಿ ಅರ್ಚಕ ಸಂತೋಷ್ ಮಹಿಳೆಯನ್ನು ಜೊತೆಗೆ ಕರೆದೊಯ್ದಿದ್ದು ಆಕೆಯೊಂದಿಗೆ ಹತ್ತು ದಿನಗಳ ಕಾಲ ಸರಸ ಸಲ್ಲಾಪ ಮಾಡಿದ್ದಾನೆ. ನಂತರ ಬದುಕಲು ಸಾಧ್ಯವಿಲ್ಲ ಎಂದು ಹೇಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಹೇಳಿ ರಾತ್ರಿ ಕಾಡಿನೊಳಗೆ ತೆರಳಿ ಅಲ್ಲಿಯೇ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಎರಡು ಮಕ್ಕಳ ತಾಯಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಸಾಯುವುದಾಗಿ ಹೇಳಿ ರಾತ್ರೋರಾತ್ರಿ ಅರ್ಚಕ ಎಸ್ಕೇಪ್ ಆಗಿದ್ದರಿಂದ ಇಡೀ ರಾತ್ರಿ ಮಹಿಳೆ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದಿದ್ದಾಳೆ. ಮುಂಜಾನೆ ವೇಳೆಗೆ ಒಂಟಿ ಮಹಿಳೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದು ಆಕೆಯ ಕರುಣಾಜನಕ ಕಥೆ ಕೇಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು ನಾಪತ್ತೆಯಾದ ಸಂತೋಷ್ ಪತ್ತೆಗೆ ಬಲೆ ಬೀಸಿದ್ದಾರೆ.
Mysuru Hindu priest in love with married woman cheats of marriage and flees away. The woman who had come to the priest for astrology made love with her and promised her of marriage leaves her in forest and flees away.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm