ಬ್ರೇಕಿಂಗ್ ನ್ಯೂಸ್
23-06-22 03:41 pm HK News Desk ಕ್ರೈಂ
ಮೈಸೂರು, ಜೂನ್ 23 : 21 ವರ್ಷದ ಅರ್ಚಕನೊಬ್ಬ ಶಾಸ್ತ್ರ ಕೇಳಲು ಬಂದ 35 ವರ್ಷದ ಗೃಹಿಣಿಯನ್ನು ಮದುವೆಯಾಗುತ್ತೇನೆಂದು ಹೇಳಿ ಹತ್ತು ದಿನಗಳ ಕಾಲ ಜೊತೆಗಿದ್ದು ಆನಂತರ ಕಾಡಿನಲ್ಲಿ ಬಿಟ್ಟು ಎಸ್ಕೇಪ್ ಆಗಿರುವ ಘಟನೆ ಬೆಳಕಿಗೆ ಬಂದಿದೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಲ್ಲಿನ ಮಹದೇಶ್ವರ ದೇವಸ್ಥಾನಕ್ಕೆ ಮಹಿಳೆ ಶಾಸ್ತ್ರ ಕೇಳಲು ಹೋಗಿದ್ದಾಗ ಅರ್ಚಕ ಪರಿಚಯವಾಗಿದ್ದ. ಆತನ ಮಾತು ಕೇಳಿ ಹತ್ತು ದಿನಗಳ ಹಿಂದೆ ತನ್ನ ಇಬ್ಬರು ಮಕ್ಕಳು, ಗಂಡನನ್ನು ಬಿಟ್ಟು ನಾಪತ್ತೆಯಾಗಿದ್ದಳು. ಬಾಳು ಕೊಡುವುದಾಗಿ ಅರ್ಚಕ ಸಂತೋಷ್ ಮಹಿಳೆಯನ್ನು ಜೊತೆಗೆ ಕರೆದೊಯ್ದಿದ್ದು ಆಕೆಯೊಂದಿಗೆ ಹತ್ತು ದಿನಗಳ ಕಾಲ ಸರಸ ಸಲ್ಲಾಪ ಮಾಡಿದ್ದಾನೆ. ನಂತರ ಬದುಕಲು ಸಾಧ್ಯವಿಲ್ಲ ಎಂದು ಹೇಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಹೇಳಿ ರಾತ್ರಿ ಕಾಡಿನೊಳಗೆ ತೆರಳಿ ಅಲ್ಲಿಯೇ ಮಹಿಳೆಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಎರಡು ಮಕ್ಕಳ ತಾಯಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಸಾಯುವುದಾಗಿ ಹೇಳಿ ರಾತ್ರೋರಾತ್ರಿ ಅರ್ಚಕ ಎಸ್ಕೇಪ್ ಆಗಿದ್ದರಿಂದ ಇಡೀ ರಾತ್ರಿ ಮಹಿಳೆ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದಿದ್ದಾಳೆ. ಮುಂಜಾನೆ ವೇಳೆಗೆ ಒಂಟಿ ಮಹಿಳೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದು ಆಕೆಯ ಕರುಣಾಜನಕ ಕಥೆ ಕೇಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದ್ದು ನಾಪತ್ತೆಯಾದ ಸಂತೋಷ್ ಪತ್ತೆಗೆ ಬಲೆ ಬೀಸಿದ್ದಾರೆ.
Mysuru Hindu priest in love with married woman cheats of marriage and flees away. The woman who had come to the priest for astrology made love with her and promised her of marriage leaves her in forest and flees away.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm