ಬ್ರೇಕಿಂಗ್ ನ್ಯೂಸ್
24-06-22 10:38 pm Mangalore Correspondent ಕ್ರೈಂ
ಪುತ್ತೂರು, ಜೂನ್ 24 : ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ, ಕೆವೈಸಿ ಅಪ್ಡೇಟ್ ಮಾಡಬೇಕೆಂದು ಹೇಳಿ ಕರೆ ಮಾಡಿ ಹಂತ ಹಂತವಾಗಿ ಎಂಟು ಲಕ್ಷ ರೂ. ಲಪಟಾಯಿಸಿದ ಘಟನೆ ನಡೆದಿದ್ದು ಮೋಸ ಹೋದ ಶಿಕ್ಷಕಿಯೊಬ್ಬರು ಪೊಲೀಸ್ ದೂರು ನೀಡಿದ್ದಾರೆ.
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸಜಿಲಾ ಎಂಬವರು ಸರಕಾರಿ ಪ್ರೌಢಶಾಲೆ ಶಿಕ್ಷಕಿಯಾಗಿದ್ದು ಅವರ ಮಗನ ಮೊಬೈಲ್ ಸಂಖ್ಯೆಗೆ ಎಸ್ ಬಿಐ ಖಾತೆಯ ಎಟಿಎಂ ಬ್ಲಾಕ್ ಆಗಿರುವ ಬಗ್ಗೆ ಜೂನ್ 11 ರಂದು ಮೆಸೇಜ್ ಬಂದಿತ್ತು. ಆನಂತರ ಜೂನ್ 23 ರಂದು ಕೆವೈಸಿ ಅಪ್ಡೇಟ್ ಮಾಡಲು ಕಸ್ಟಮರ್ ಕೇರ್ ನಂಬರ್ ಎಂದು 8240871104 ಗೆ ಕರೆ ಮಾಡಲು ಮೆಸೇಜ್ ಬಂದಿತ್ತು. ಅದರಂತೆ ಮಗ ಪ್ರಣವ್ ಆ ಸಂಖ್ಯೆಗೆ ಕರೆ ಮಾಡಿದ್ದು ಆ ಕಡೆಯಿಂದ ನಿಮ್ಮ ಖಾತೆಯ ಪಿನ್ ಜನರೇಟ್ ಮಾಡಲು ಎಸ್ ಬಿಐ ಖಾತೆಯುಳ್ಳ ಮನೆಯ ಇತರ ಸದಸ್ಯರ ಮಾಹಿತಿ ಕೇಳಿದ್ದಾರೆ.
ಆನಂತರ ತಾಯಿಯ ಎಸ್ ಬಿಐ ಖಾತೆಯ ವಿವರ ನೀಡಿದ್ದಾನೆ. ಬಳಿಕ ಅದೇ ಅಪರಿಚಿತ ವ್ಯಕ್ತಿ ಶಿಕ್ಷಕಿಯ ಮೊಬೈಲ್ ಸಂಖ್ಯೆಗೆ ಬಂದಿರುವ, ಓಟಿಪಿ ಸಂಖ್ಯೆ ಹೇಳುವಂತೆ ತಿಳಿಸಿದ್ದಾನೆ. ಕೊನೆಗೆ, ನೀವು ಹತ್ತಿರದ ಎಟಿಎಂ ಕೇಂದ್ರಕ್ಕೆ ಹೋಗಿ ಇಂಟರ್ನೆಟ್ ಬ್ಯಾಂಕಿಂಗ್ ಜನರೇಟ್ ಮಾಡುವಂತೆ ಸೂಚಿಸಿದ್ದ. ಆದರೆ ಅದೇ ದಿನ ಸಂಜೆ ಬ್ಯಾಂಕಿನಿಂದ ಕರೆ ಮಾಡಿ, ನೀವು ಬ್ಯಾಂಕ್ ಖಾತೆಯ ಮೊಬೈಲ್ ಸಂಖ್ಯೆ ಬದಲಿಸಿದ್ದೀರಾ ಎಂದು ಕೇಳಿದಾಗ ತಾಯಿ, ಮಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ, ಖಾತೆಯಲ್ಲಿದ್ದ ಎಂಟು ಲಕ್ಷ ರೂ.ವನ್ನು ಹಂತ ಹಂತವಾಗಿ ಖಾಲಿ ಮಾಡಲಾಗಿತ್ತು. 25 ಸಾವಿರ, 30 ಸಾವಿರ, 50 ಸಾವಿರದಂತೆ ಮೂರು ಬಾರಿ, ಆನಂತರ ತಲಾ ಎರಡು ಲಕ್ಷದಂತೆ ಮೂರು ಬಾರಿ ಒಟ್ಟು 7,47,080 ರೂ. ಹಣವನ್ನು ಲಪಟಾಯಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದಾಗ, ನಿಮ್ಮ ಖಾತೆಯಿಂದ ಎಂಟು ಲಕ್ಷ ರೂ. ಯಾರೋ ಲೋನ್ ಪಡೆದಿದ್ದಾಗಿ ತಿಳಿಸಿದ್ದಾರೆ. ಮೋಸದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರ್ ವಂಚಕರು ಎಟಿಎಂ ಬ್ಲಾಕ್ ಎಂದು ಹೇಳಿ ಯಾಮಾರಿಸಿ ಹಣ ಲಪಟಾಯಿಸಿದ್ದಾಗಿ ಪೊಲೀಸರು ಶಂಕಿಸಿದ್ದಾರೆ.
Mangalore Cyber crime, frauds loot 8 lakhs from teachers account in Puttur.
12-08-26 11:37 am
HK News Staffer
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:32 am
HK News Staffer
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm