ಬ್ರೇಕಿಂಗ್ ನ್ಯೂಸ್
24-06-22 10:38 pm Mangalore Correspondent ಕ್ರೈಂ
ಪುತ್ತೂರು, ಜೂನ್ 24 : ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ, ಕೆವೈಸಿ ಅಪ್ಡೇಟ್ ಮಾಡಬೇಕೆಂದು ಹೇಳಿ ಕರೆ ಮಾಡಿ ಹಂತ ಹಂತವಾಗಿ ಎಂಟು ಲಕ್ಷ ರೂ. ಲಪಟಾಯಿಸಿದ ಘಟನೆ ನಡೆದಿದ್ದು ಮೋಸ ಹೋದ ಶಿಕ್ಷಕಿಯೊಬ್ಬರು ಪೊಲೀಸ್ ದೂರು ನೀಡಿದ್ದಾರೆ.
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸಜಿಲಾ ಎಂಬವರು ಸರಕಾರಿ ಪ್ರೌಢಶಾಲೆ ಶಿಕ್ಷಕಿಯಾಗಿದ್ದು ಅವರ ಮಗನ ಮೊಬೈಲ್ ಸಂಖ್ಯೆಗೆ ಎಸ್ ಬಿಐ ಖಾತೆಯ ಎಟಿಎಂ ಬ್ಲಾಕ್ ಆಗಿರುವ ಬಗ್ಗೆ ಜೂನ್ 11 ರಂದು ಮೆಸೇಜ್ ಬಂದಿತ್ತು. ಆನಂತರ ಜೂನ್ 23 ರಂದು ಕೆವೈಸಿ ಅಪ್ಡೇಟ್ ಮಾಡಲು ಕಸ್ಟಮರ್ ಕೇರ್ ನಂಬರ್ ಎಂದು 8240871104 ಗೆ ಕರೆ ಮಾಡಲು ಮೆಸೇಜ್ ಬಂದಿತ್ತು. ಅದರಂತೆ ಮಗ ಪ್ರಣವ್ ಆ ಸಂಖ್ಯೆಗೆ ಕರೆ ಮಾಡಿದ್ದು ಆ ಕಡೆಯಿಂದ ನಿಮ್ಮ ಖಾತೆಯ ಪಿನ್ ಜನರೇಟ್ ಮಾಡಲು ಎಸ್ ಬಿಐ ಖಾತೆಯುಳ್ಳ ಮನೆಯ ಇತರ ಸದಸ್ಯರ ಮಾಹಿತಿ ಕೇಳಿದ್ದಾರೆ.
ಆನಂತರ ತಾಯಿಯ ಎಸ್ ಬಿಐ ಖಾತೆಯ ವಿವರ ನೀಡಿದ್ದಾನೆ. ಬಳಿಕ ಅದೇ ಅಪರಿಚಿತ ವ್ಯಕ್ತಿ ಶಿಕ್ಷಕಿಯ ಮೊಬೈಲ್ ಸಂಖ್ಯೆಗೆ ಬಂದಿರುವ, ಓಟಿಪಿ ಸಂಖ್ಯೆ ಹೇಳುವಂತೆ ತಿಳಿಸಿದ್ದಾನೆ. ಕೊನೆಗೆ, ನೀವು ಹತ್ತಿರದ ಎಟಿಎಂ ಕೇಂದ್ರಕ್ಕೆ ಹೋಗಿ ಇಂಟರ್ನೆಟ್ ಬ್ಯಾಂಕಿಂಗ್ ಜನರೇಟ್ ಮಾಡುವಂತೆ ಸೂಚಿಸಿದ್ದ. ಆದರೆ ಅದೇ ದಿನ ಸಂಜೆ ಬ್ಯಾಂಕಿನಿಂದ ಕರೆ ಮಾಡಿ, ನೀವು ಬ್ಯಾಂಕ್ ಖಾತೆಯ ಮೊಬೈಲ್ ಸಂಖ್ಯೆ ಬದಲಿಸಿದ್ದೀರಾ ಎಂದು ಕೇಳಿದಾಗ ತಾಯಿ, ಮಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ, ಖಾತೆಯಲ್ಲಿದ್ದ ಎಂಟು ಲಕ್ಷ ರೂ.ವನ್ನು ಹಂತ ಹಂತವಾಗಿ ಖಾಲಿ ಮಾಡಲಾಗಿತ್ತು. 25 ಸಾವಿರ, 30 ಸಾವಿರ, 50 ಸಾವಿರದಂತೆ ಮೂರು ಬಾರಿ, ಆನಂತರ ತಲಾ ಎರಡು ಲಕ್ಷದಂತೆ ಮೂರು ಬಾರಿ ಒಟ್ಟು 7,47,080 ರೂ. ಹಣವನ್ನು ಲಪಟಾಯಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದಾಗ, ನಿಮ್ಮ ಖಾತೆಯಿಂದ ಎಂಟು ಲಕ್ಷ ರೂ. ಯಾರೋ ಲೋನ್ ಪಡೆದಿದ್ದಾಗಿ ತಿಳಿಸಿದ್ದಾರೆ. ಮೋಸದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರ್ ವಂಚಕರು ಎಟಿಎಂ ಬ್ಲಾಕ್ ಎಂದು ಹೇಳಿ ಯಾಮಾರಿಸಿ ಹಣ ಲಪಟಾಯಿಸಿದ್ದಾಗಿ ಪೊಲೀಸರು ಶಂಕಿಸಿದ್ದಾರೆ.
Mangalore Cyber crime, frauds loot 8 lakhs from teachers account in Puttur.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm