ಬ್ರೇಕಿಂಗ್ ನ್ಯೂಸ್
24-06-22 10:38 pm Mangalore Correspondent ಕ್ರೈಂ
ಪುತ್ತೂರು, ಜೂನ್ 24 : ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ, ಕೆವೈಸಿ ಅಪ್ಡೇಟ್ ಮಾಡಬೇಕೆಂದು ಹೇಳಿ ಕರೆ ಮಾಡಿ ಹಂತ ಹಂತವಾಗಿ ಎಂಟು ಲಕ್ಷ ರೂ. ಲಪಟಾಯಿಸಿದ ಘಟನೆ ನಡೆದಿದ್ದು ಮೋಸ ಹೋದ ಶಿಕ್ಷಕಿಯೊಬ್ಬರು ಪೊಲೀಸ್ ದೂರು ನೀಡಿದ್ದಾರೆ.
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸಜಿಲಾ ಎಂಬವರು ಸರಕಾರಿ ಪ್ರೌಢಶಾಲೆ ಶಿಕ್ಷಕಿಯಾಗಿದ್ದು ಅವರ ಮಗನ ಮೊಬೈಲ್ ಸಂಖ್ಯೆಗೆ ಎಸ್ ಬಿಐ ಖಾತೆಯ ಎಟಿಎಂ ಬ್ಲಾಕ್ ಆಗಿರುವ ಬಗ್ಗೆ ಜೂನ್ 11 ರಂದು ಮೆಸೇಜ್ ಬಂದಿತ್ತು. ಆನಂತರ ಜೂನ್ 23 ರಂದು ಕೆವೈಸಿ ಅಪ್ಡೇಟ್ ಮಾಡಲು ಕಸ್ಟಮರ್ ಕೇರ್ ನಂಬರ್ ಎಂದು 8240871104 ಗೆ ಕರೆ ಮಾಡಲು ಮೆಸೇಜ್ ಬಂದಿತ್ತು. ಅದರಂತೆ ಮಗ ಪ್ರಣವ್ ಆ ಸಂಖ್ಯೆಗೆ ಕರೆ ಮಾಡಿದ್ದು ಆ ಕಡೆಯಿಂದ ನಿಮ್ಮ ಖಾತೆಯ ಪಿನ್ ಜನರೇಟ್ ಮಾಡಲು ಎಸ್ ಬಿಐ ಖಾತೆಯುಳ್ಳ ಮನೆಯ ಇತರ ಸದಸ್ಯರ ಮಾಹಿತಿ ಕೇಳಿದ್ದಾರೆ.
ಆನಂತರ ತಾಯಿಯ ಎಸ್ ಬಿಐ ಖಾತೆಯ ವಿವರ ನೀಡಿದ್ದಾನೆ. ಬಳಿಕ ಅದೇ ಅಪರಿಚಿತ ವ್ಯಕ್ತಿ ಶಿಕ್ಷಕಿಯ ಮೊಬೈಲ್ ಸಂಖ್ಯೆಗೆ ಬಂದಿರುವ, ಓಟಿಪಿ ಸಂಖ್ಯೆ ಹೇಳುವಂತೆ ತಿಳಿಸಿದ್ದಾನೆ. ಕೊನೆಗೆ, ನೀವು ಹತ್ತಿರದ ಎಟಿಎಂ ಕೇಂದ್ರಕ್ಕೆ ಹೋಗಿ ಇಂಟರ್ನೆಟ್ ಬ್ಯಾಂಕಿಂಗ್ ಜನರೇಟ್ ಮಾಡುವಂತೆ ಸೂಚಿಸಿದ್ದ. ಆದರೆ ಅದೇ ದಿನ ಸಂಜೆ ಬ್ಯಾಂಕಿನಿಂದ ಕರೆ ಮಾಡಿ, ನೀವು ಬ್ಯಾಂಕ್ ಖಾತೆಯ ಮೊಬೈಲ್ ಸಂಖ್ಯೆ ಬದಲಿಸಿದ್ದೀರಾ ಎಂದು ಕೇಳಿದಾಗ ತಾಯಿ, ಮಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ, ಖಾತೆಯಲ್ಲಿದ್ದ ಎಂಟು ಲಕ್ಷ ರೂ.ವನ್ನು ಹಂತ ಹಂತವಾಗಿ ಖಾಲಿ ಮಾಡಲಾಗಿತ್ತು. 25 ಸಾವಿರ, 30 ಸಾವಿರ, 50 ಸಾವಿರದಂತೆ ಮೂರು ಬಾರಿ, ಆನಂತರ ತಲಾ ಎರಡು ಲಕ್ಷದಂತೆ ಮೂರು ಬಾರಿ ಒಟ್ಟು 7,47,080 ರೂ. ಹಣವನ್ನು ಲಪಟಾಯಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದಾಗ, ನಿಮ್ಮ ಖಾತೆಯಿಂದ ಎಂಟು ಲಕ್ಷ ರೂ. ಯಾರೋ ಲೋನ್ ಪಡೆದಿದ್ದಾಗಿ ತಿಳಿಸಿದ್ದಾರೆ. ಮೋಸದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರ್ ವಂಚಕರು ಎಟಿಎಂ ಬ್ಲಾಕ್ ಎಂದು ಹೇಳಿ ಯಾಮಾರಿಸಿ ಹಣ ಲಪಟಾಯಿಸಿದ್ದಾಗಿ ಪೊಲೀಸರು ಶಂಕಿಸಿದ್ದಾರೆ.
Mangalore Cyber crime, frauds loot 8 lakhs from teachers account in Puttur.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm