ಬ್ರೇಕಿಂಗ್ ನ್ಯೂಸ್
24-06-22 10:38 pm Mangalore Correspondent ಕ್ರೈಂ
ಪುತ್ತೂರು, ಜೂನ್ 24 : ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ, ಕೆವೈಸಿ ಅಪ್ಡೇಟ್ ಮಾಡಬೇಕೆಂದು ಹೇಳಿ ಕರೆ ಮಾಡಿ ಹಂತ ಹಂತವಾಗಿ ಎಂಟು ಲಕ್ಷ ರೂ. ಲಪಟಾಯಿಸಿದ ಘಟನೆ ನಡೆದಿದ್ದು ಮೋಸ ಹೋದ ಶಿಕ್ಷಕಿಯೊಬ್ಬರು ಪೊಲೀಸ್ ದೂರು ನೀಡಿದ್ದಾರೆ.
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸಜಿಲಾ ಎಂಬವರು ಸರಕಾರಿ ಪ್ರೌಢಶಾಲೆ ಶಿಕ್ಷಕಿಯಾಗಿದ್ದು ಅವರ ಮಗನ ಮೊಬೈಲ್ ಸಂಖ್ಯೆಗೆ ಎಸ್ ಬಿಐ ಖಾತೆಯ ಎಟಿಎಂ ಬ್ಲಾಕ್ ಆಗಿರುವ ಬಗ್ಗೆ ಜೂನ್ 11 ರಂದು ಮೆಸೇಜ್ ಬಂದಿತ್ತು. ಆನಂತರ ಜೂನ್ 23 ರಂದು ಕೆವೈಸಿ ಅಪ್ಡೇಟ್ ಮಾಡಲು ಕಸ್ಟಮರ್ ಕೇರ್ ನಂಬರ್ ಎಂದು 8240871104 ಗೆ ಕರೆ ಮಾಡಲು ಮೆಸೇಜ್ ಬಂದಿತ್ತು. ಅದರಂತೆ ಮಗ ಪ್ರಣವ್ ಆ ಸಂಖ್ಯೆಗೆ ಕರೆ ಮಾಡಿದ್ದು ಆ ಕಡೆಯಿಂದ ನಿಮ್ಮ ಖಾತೆಯ ಪಿನ್ ಜನರೇಟ್ ಮಾಡಲು ಎಸ್ ಬಿಐ ಖಾತೆಯುಳ್ಳ ಮನೆಯ ಇತರ ಸದಸ್ಯರ ಮಾಹಿತಿ ಕೇಳಿದ್ದಾರೆ.
ಆನಂತರ ತಾಯಿಯ ಎಸ್ ಬಿಐ ಖಾತೆಯ ವಿವರ ನೀಡಿದ್ದಾನೆ. ಬಳಿಕ ಅದೇ ಅಪರಿಚಿತ ವ್ಯಕ್ತಿ ಶಿಕ್ಷಕಿಯ ಮೊಬೈಲ್ ಸಂಖ್ಯೆಗೆ ಬಂದಿರುವ, ಓಟಿಪಿ ಸಂಖ್ಯೆ ಹೇಳುವಂತೆ ತಿಳಿಸಿದ್ದಾನೆ. ಕೊನೆಗೆ, ನೀವು ಹತ್ತಿರದ ಎಟಿಎಂ ಕೇಂದ್ರಕ್ಕೆ ಹೋಗಿ ಇಂಟರ್ನೆಟ್ ಬ್ಯಾಂಕಿಂಗ್ ಜನರೇಟ್ ಮಾಡುವಂತೆ ಸೂಚಿಸಿದ್ದ. ಆದರೆ ಅದೇ ದಿನ ಸಂಜೆ ಬ್ಯಾಂಕಿನಿಂದ ಕರೆ ಮಾಡಿ, ನೀವು ಬ್ಯಾಂಕ್ ಖಾತೆಯ ಮೊಬೈಲ್ ಸಂಖ್ಯೆ ಬದಲಿಸಿದ್ದೀರಾ ಎಂದು ಕೇಳಿದಾಗ ತಾಯಿ, ಮಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ, ಖಾತೆಯಲ್ಲಿದ್ದ ಎಂಟು ಲಕ್ಷ ರೂ.ವನ್ನು ಹಂತ ಹಂತವಾಗಿ ಖಾಲಿ ಮಾಡಲಾಗಿತ್ತು. 25 ಸಾವಿರ, 30 ಸಾವಿರ, 50 ಸಾವಿರದಂತೆ ಮೂರು ಬಾರಿ, ಆನಂತರ ತಲಾ ಎರಡು ಲಕ್ಷದಂತೆ ಮೂರು ಬಾರಿ ಒಟ್ಟು 7,47,080 ರೂ. ಹಣವನ್ನು ಲಪಟಾಯಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದಾಗ, ನಿಮ್ಮ ಖಾತೆಯಿಂದ ಎಂಟು ಲಕ್ಷ ರೂ. ಯಾರೋ ಲೋನ್ ಪಡೆದಿದ್ದಾಗಿ ತಿಳಿಸಿದ್ದಾರೆ. ಮೋಸದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರ್ ವಂಚಕರು ಎಟಿಎಂ ಬ್ಲಾಕ್ ಎಂದು ಹೇಳಿ ಯಾಮಾರಿಸಿ ಹಣ ಲಪಟಾಯಿಸಿದ್ದಾಗಿ ಪೊಲೀಸರು ಶಂಕಿಸಿದ್ದಾರೆ.
Mangalore Cyber crime, frauds loot 8 lakhs from teachers account in Puttur.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 05:07 pm
HK News Staffer
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm