ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm