ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm