ಬ್ರೇಕಿಂಗ್ ನ್ಯೂಸ್
30-06-22 07:14 pm HK News Desk ಕ್ರೈಂ
ಅಗರ್ತಲಾ, ಜೂ 30: ಕಳೆದ ವರ್ಷ ನಾಲ್ಕೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣದಲ್ಲಿ ತಪ್ಪಿತಸ್ಥನೆಂದು ಸಾಬೀತಾದ ಆರೋಪಿಗೆ ತ್ರಿಪುರಾದ ಖೋವೈ ಜಿಲ್ಲಾ ನ್ಯಾಯಾಲಯವು ಗಲ್ಲುಶಿಕ್ಷೆ ವಿಧಿಸಿದೆ.
ಖೋವೈ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆ ವಿಧಿಸಿದ ಮೊದಲ ನಿದರ್ಶನ ಇದಾಗಿದ್ದು, ಅಪರಾಧಿ ಕಾಳಿಚರಣ್ಗೆ ಮರಣದಂಡನೆ ವಿಧಿಸಲಾಗಿದೆ. ಈ ಹಿಂದೆ ಆರೋಪಿ ಸಾಕ್ಷ್ಯಾಧಾರಗಳಿಂದ ತಪ್ಪಿಸಿಕೊಂಡಿದ್ದನು. ಸತತ ವಿಚಾರಣೆಯ ಬಳಿಕ ಸುಳ್ಳು ಮಾಹಿತಿ ಹಂಚಿಕೊಂಡಿರುವುದು ಸಾಬೀತಾಗಿದ್ದು ಅಪರಾಧಿಗೆ ಗಲ್ಲು ಶಿಕ್ಷೆಗೆ ಗುರಿಪಡಿಸಲಾಗಿದೆ.
ತ್ರಿಪುರಾದ ಖೋವೈ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಶಕರಿ ದಾಸ್ ಅವರು ತನಿಖಾಧಿಕಾರಿ ಬಿದೀಶ್ವರ್ ಸಿನ್ಹಾರ ವರದಿಯನ್ನು ಪರಿಶೀಲನೆ ನಡೆಸಿದ ಬಳಿಕ ಮರಣದಂಡನೆಗೆ ಆದೇಶಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 35 ಸಾಕ್ಷಿಗಳನ್ನು ದಾಖಲಿಸಲಾಗಿದೆ.
2021ರ ಫೆಬ್ರವರಿ 22ರಂದು ಖೋವೈ ಜಿಲ್ಲೆಯ ಟೆಲಿಯಮುರಾದ ಡಸ್ಕಿ ಪ್ರದೇಶದಿಂದ 4 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಅದಾದ 6 ದಿನಗಳ ಬಳಿಕ ಗಾಯಗೊಂಡ ಸ್ಥಿತಿಯಲ್ಲಿ ಕಾಡಿನಲ್ಲಿ ಬಿದ್ದಿದ್ದ ಆಕೆಯ ಮೃತದೇಹವನ್ನು ಹೊರತೆಗೆಯಲಾಗಿತ್ತು.
The Khowai District Court in Tripura on Wednesday sentenced a man to death for raping and murdering a minor child in February last year. District court and special POCSO Act judge Shankari Das passed the death sentence after a year of submissions and trial.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm