ಬ್ರೇಕಿಂಗ್ ನ್ಯೂಸ್
02-07-22 05:02 pm HK News Desk ಕ್ರೈಂ
ನವದೆಹಲಿ, ಜುಲೈ 2: ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಉದಯಪುರದ ಕನ್ನಯ್ಯಲಾಲ್ ಕೊಲೆ ದೇಶದಲ್ಲಿ ಸದ್ದು ಮಾಡಿರುವ ಬೆನ್ನಲ್ಲೇ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲೂ ಇದೇ ರೀತಿಯ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ.
ಅಮರಾವತಿ ನಗರದಲ್ಲಿ ಪಶು ಚಿಕಿತ್ಸಾಲಯದ ಮೆಡಿಕಲ್ ಶಾಪ್ ಹೊಂದಿದ್ದ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ (54) ಎಂಬವರನ್ನು ಜೂನ್ 21 ರಂದು ರಾತ್ರಿ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ. ಉಮೇಶ್ ಕೊಲ್ಹೆ ಅವರು ಕೂಡ ಕೊಲೆಯಾಗುವುದಕ್ಕೂ ಮುನ್ನ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದರು. ಆದರೆ ಆಗ ಯಾವ ಕಾರಣಕ್ಕೆ ಕೊಲೆ ಮಾಡಿದ್ದರು ಎನ್ನೋದು ತಿಳಿದುಬಂದಿರಲಿಲ್ಲ. ರಾತ್ರಿ ವೇಳೆ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಆಗಂತುಕರು ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಂದಿದ್ದಾರೆ. ಈ ವೇಳೆ, ಉಮೇಶ್ ಅವರ ಮಗ, ಪತ್ನಿಯೂ ಇದ್ದುದರಿಂದ ರಸ್ತೆಗೆ ಬಂದು ಬೊಬ್ಬೆ ಹಾಕಿದ್ದರು. ಬಳಿಕ ಹಂತಕರು ಪರಾರಿಯಾಗಿದ್ದರೆ, ಉಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಉಮೇಶ್ ಸಾವು ಕಂಡಿದ್ದರು.
ಮಗ ನೀಡಿದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ತೌಫೀಕ್ ತಸ್ಲಿಮ್ (22), ಶಾರುಖ್ ಪಠಾಣ್ (25), ಅಬ್ದುಲ್ ತೌಫಿಕ್ (24), ಶೋಯೆಬ್ ಖಾನ್ (22), ಅತಿಬ್ ರಶೀದ್ (22), ಮುದಾಸಿರ್ ಇಬ್ರಾಹಿಂ(23) ಬಂಧಿತರು.
ಇದೀಗ ಕನ್ನಯ್ಯ ಲಾಲ್ ಕೊಲೆಯ ವಿಚಾರ ಸಾಕಷ್ಟು ಸದ್ದು ಮಾಡಿರುವುದರಿಂದ ಉಮೇಶ್ ಅವರನ್ನೂ ಇದೇ ಕಾರಣಕ್ಕಾಗಿ ಕೊಲೆ ಮಾಡಲಾಗಿತ್ತು ಎಂದು ಅಮರಾವತಿ ಬಿಜೆಪಿ ಘಟಕದ ನಾಯಕರು ಆರೋಪಿಸಿದ್ದಾರೆ. ಅಲ್ಲದೆ, ಪೊಲೀಸರು ಕೊಲೆಯ ಹಿಂದಿನ ಕಾರಣ ಪತ್ತೆ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.
ಆರೋಪ ಕೇಳಿಬಂದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಉಮೇಶ್ ಕೊಲ್ಹೆ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದ್ದಾರೆ.
A 54-year-old chemist was hacked to death in Maharashtra’s Amravati for allegedly making a social media post in support of suspended BJP leader Nupur Sharma.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm