ಬ್ರೇಕಿಂಗ್ ನ್ಯೂಸ್
01-10-20 02:30 pm Headline Karnataka News Network ಕ್ರೈಂ
ಬಲರಾಂಪುರ, ಅಕ್ಟೋಬರ್ 1: ಹತ್ರಾಸ್ ಅತ್ಯಾಚಾರ ಪ್ರಕರಣ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿರುವ ನಡುವೆಯೇ ಈ ಘಟನೆ ನಡೆದಿದೆ. ಕಾಲೇಜಿನ ಅಡ್ಮೀಷನ್ಗೆ ಹೋದ ಯುವತಿ ಹಿಂತಿರುಗುವ ವೇಳೆ ಇಬ್ಬರು ಪುರುಷರು ದಲಿತ ಜನಾಂಗಕ್ಕೆ ಸೇರಿದ ಯುವತಿಯ ಮೇಲೆ ಎರಗಿದ್ದು ಗಂಭೀರ ಸ್ಥಿತಿಯಲ್ಲಿ ಈಕೆ ಮನೆ ಸೇರಿದ್ದಳು ಎಂದು ಕುಟುಂಬದವರು ತಿಳಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ದೇವ್ ರಂಜನ್ ವರ್ಮ ಹೇಳಿದ್ದಾರೆ.
ಸಮೀಪದ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಳು ಎಂದು ಅವರು ತಿಳಿಸಿದ್ದಾರೆ. ಆಸ್ಪತ್ರೆಯವರು ಪೊಲೀಸರಿಗೆ ವಿಷಯ ವರದಿ ಮಾಡಿದಾಗ ಯುವತಿಯ ಕುಟುಂಬದವರು ಆಕೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಳು ಎಂದು ತಿಳಿಸಿದರು. ಆರೋಪಿಗಳಾದ ಶಾಹಿದ್ ಮತ್ತು ಸಾಹಿಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ವರ್ಮ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಹತ್ರಾಸ್ ಘಟನೆ ಬಳಿಕ ಮತ್ತೊಬ್ಬ ಮಗಳು ಬಲರಾಂಪುರದಲ್ಲಿ ಸಾಮೂಹಿಕ ಅತ್ಯಾಚಾರದಿಂದ ಸಾವಿಗೀಡಾಗಿದ್ದಾಳೆ. ಶ್ರದ್ಧಾಂಜಲಿ! ಎಂದು ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇಂಜೆಕ್ಷನ್ ನೀಡಿ ಅತ್ಯಾಚಾರ:
ಬುಧವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಸಂತ್ರಸ್ತೆ ತಾಯಿ, ‘ಅತ್ಯಾಚಾರಿಗಳು ಮಗಳ ಕಾಲು ಮತ್ತು ಬೆನ್ನನ್ನು ಮುರಿದಿದ್ದಾರೆ’ ಎಂದು ಆರೋಪಿಸಿದ್ದಾರೆ. ಆದರೆ ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ. ಶವ ಪರೀಕ್ಷೆಯಲ್ಲಿ ಇದು ದೃಢಪಟ್ಟಿಲ್ಲ ಎಂದಿದ್ದಾರೆ.
ಕಾಲೇಜಿಗೆ ಸೇರಲು ನನ್ನ ಮಗಳು ಹೋಗಿದ್ದಳು. ಬರುವಾಗ ಮೂವರು ಅವಳನ್ನು ಅಪಹರಿಸಿ ತಮ್ಮ ಕೊಠಡಿಗೆ ಒಯ್ದಿದ್ದಾರೆ. ಅಲ್ಲಿ ಅವಳಿಗೆ ಇಂಜೆಕ್ಷನ್ ನೀಡಿ ಅತ್ಯಾಚಾರ ಮಾಡಿದ್ದಾರೆ. ನಂತರ ಅವಳನ್ನು ಇ– ರಿಕ್ಷಾದಲ್ಲಿ ಮನೆಗೆ ಕಳುಹಿಸಿದ್ದಾರೆ. ಅವಳನ್ನು ಮನೆಯ ಹತ್ತಿರ ಬಿಟ್ಟು ರಿಕ್ಷಾ ತೆರಳಿದೆ. ನನ್ನ ಮಗಳು ನಿಂತುಕೊಳ್ಳುವ ಮತ್ತು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ‘ ಎಂದು ತಾಯಿ ವಿವರಿಸಿದ್ದಾರೆ.
ಶವಪರೀಕ್ಷೆ ಬಳಿಕ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬುಧವಾರ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಸ್ಥಳೀಯ ಮುಖಂಡರು ಸಂತ್ರಸ್ತೆ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ ರೂ. 6 ಲಕ್ಷ ಆರ್ಥಿಕ ನೆರವು ಒದಗಿಸುವ ಪತ್ರವನ್ನು ನೀಡಿ, ತಾಯಿಯ ಹೆಸರಿಗೆ ಹಣವನ್ನು ಮಧ್ಯಾಹ್ನದ ವೇಳೆಗೆ ವರ್ಗಾಯಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm