ಬ್ರೇಕಿಂಗ್ ನ್ಯೂಸ್
11-07-22 06:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 11: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ವೈದ್ಯನಾಗಿರುವ ಡಾ.ಅನುಷ್ ನಾಯ್ಕ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
2021ರ ಮಾರ್ಚ್ ತಿಂಗಳಿನಲ್ಲಿ ಬಂಟ್ವಾಳ ತಾಲೂಕಿನ ಮಾಣಿಯಲ್ಲಿರುವ ಸರಕಾರಿ ಆಸ್ಪತ್ರೆಯ ಬಳಿ ಸಿಕ್ಕಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದು ಪ್ರೀತಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಇತ್ತೀಚೆಗೆ ವೈದ್ಯನಿಗೆ ಬೇರೆ ಮದುವೆಯಾಗಿದ್ದು, ಈ ಬಗ್ಗೆ ಫೋನ್ ಮಾಡಿದ್ದ ಹುಡುಗಿಯನ್ನು ಗದರಿಸಿದ್ದಾನೆ. ಅಲ್ಲದೆ, ಫೋನ್ ಕಟ್ ಮಾಡದಿದ್ದರೆ ನೀನು ಮತ್ತು ನಿನ್ನ ತಂದೆ, ತಾಯಿಯನ್ನು ಕೊಂದು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಾಯಿ ಜುಲೈ 10ರಂದು ವಿಟ್ಲ ಠಾಣೆಗೆ ದೂರು ನೀಡಿದ್ದರು.
ಅದರಂತೆ, ವಿಟ್ಲ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಇಂದು ವಿಟ್ಲ ಪೊಲೀಸರು ಮಾಣಿ ಬಳಿಯಿಂದ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಅನುಷ್ ನಾಯ್ಕ ಮಾಣಿ ಗ್ರಾಮದ ನಿವಾಸಿಯಾಗಿದ್ದು, ಮಂಗಳೂರಿನ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ವೈದ್ಯನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ಒಂದು ಮದುವೆಯಾಗಿ ಆಕೆಯನ್ನು ತ್ಯಜಿಸಿದ್ದ ಅನುಷ್ ನಾಯ್ಕ ಇತ್ತೀಚೆಗೆ ಎರಡನೇ ಮದುವೆಯಾಗಿದ್ದ. ಬಾಲಕಿಯು ಒಂದು ವರ್ಷದ ಹಿಂದಿನ ವಿಚಾರಕ್ಕೆ ಈಗ ಪೊಲೀಸ್ ದೂರು ನೀಡಿದ್ದು, ಆರೋಪಿ ವೈದ್ಯ ಜೈಲು ಪಾಲಾಗುವಂತೆ ಮಾಡಿದ್ದಾಳೆ.
Mangalore Wenlock doctor arrested by Vitla police for sexual harassment. The arrested has been identified as Dr Anush.
05-02-26 10:37 am
Bangalore Correspondent
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm