ಬ್ರೇಕಿಂಗ್ ನ್ಯೂಸ್
08-08-22 10:20 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 8: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಹಿಂಬಾಲಿಸುವುದು, ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಒಡ್ಡುವ ಕೃತ್ಯಗಳು ಮರುಕಳಿಸುತ್ತಿವೆ. ಈ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ತನಗೆ ಬಂದ ಬೆದರಿಕೆ ಕರೆ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ರಾತ್ರಿ 10.30ಕ್ಕೆ ಪಂಪ್ವೆಲ್ ನಿಂದ ಕಾರಿನಲ್ಲಿ ಬಿಕರ್ನಕಟ್ಟೆಯ ತನ್ನ ಮನೆಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಇಬ್ಬರು ಯುವಕರು ಹಿಂಬಾಲಿಸಿದ್ದಾರೆ. ಮನೆಗೆ ಮುಟ್ಟುವಷ್ಟರಲ್ಲಿ ಇಂಟರ್ನೆಟ್ ಕರೆ ಬಂದಿದ್ದು ನೀನು ಈ ಬಾರಿ ಬಚಾವಾಗಿದ್ದೀಯಾ.. ನಾವು ಬಿಡೋದಿಲ್ಲ. ನೀನು ಸೇರಿ ಮೂವರಿಗೆ ಸ್ಕೆಚ್ ಹಾಕಿದ್ದೇವೆ. ಇವತ್ತಲ್ಲ ನಾಳೆ, ತೆಗೆದೇ ಬಿಡುತ್ತೇವೆ ಎಂದು ತುಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಬಳ್ಳಾಲ್ ಬಾಗಿನ ಕಾರ್ಯಕರ್ತನಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಕರೆ ಮಾಡಿ, ತುಳು ಭಾಷೆಯಲ್ಲಿ ನಿಂದಿಸಿದ್ದಲ್ಲದೆ, ನಿನ್ನನ್ನು ತೆಗೆಯದೇ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದ್ದ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಳೆದ ವಾರದ ಉಳ್ಳಾಲ ಠಾಣೆಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಲು ಬಂದಿದ್ದರು. ಕೊನೆಗೆ, ಪೊಲೀಸರು ವಿಚಾರಣೆ ನಡೆಸಿದಾಗ ತಡಬಡಾಯಿಸಿದ್ದರಿಂದ ಸುಳ್ಳು ದೂರೆಂದು ಪರಿಗಣಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು.
Mangalore Hindu activist gets life threat via internet call, says we will surely kill you, A case has been registered at Kankanady Town Police Station. We have already targeted three to kill we will kill you also.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm