ಬ್ರೇಕಿಂಗ್ ನ್ಯೂಸ್
13-08-22 09:17 pm HK News Desk ಕ್ರೈಂ
ಹಾಸನ, ಆಗಸ್ಟ್ 13: ಕೋರ್ಟ್ ಆವರಣದಲ್ಲೇ ತನ್ನ ಪತ್ನಿಯ ಕತ್ತನ್ನೇ ಕೊಯ್ದು ಗಂಡನೇ ಬರ್ಬರವಾಗಿ ಹತ್ಯೆಗೈದ ಭಯಾನಕ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶನಿವಾರ ನಡೆದಿದೆ. ಪತ್ನಿ ಚೈತ್ರಾಳನ್ನು ಕೊಂದ ಆರೋಪಿ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ್, ಹೊನಮಾರನಹಳ್ಳಿ ಗ್ರಾಮದ ನಿವಾಸಿ ಚೈತ್ರಾಳನ್ನು 7 ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ. ಇದೇ ವಿಚಾರದಲ್ಲಿ ಕೊರೊನಾ ಲಾಕ್ಡೌನ್ ವೇಳೆ ಭಾರೀ ಗಲಾಟೆ ಆಗಿತ್ತು. ಚೈತ್ರಾಳ ಸರ, ಕಿವಿಯೋಲೆ ಕಿತ್ತುಕೊಂಡು ಗಂಡನೇ ಹಲ್ಲೆ ಮಾಡಿದ್ದ. ಗಂಡನ ಕಾಟ ತಾಳಲಾರದೆ ಚೈತ್ರಾ ತವರು ಮನೆಯಲ್ಲೇ ಇದ್ದಳು. ಇತ್ತೀಚೆಗೆ ಗಂಡನಿಂದ ವಿಚ್ಚೇದನ ಕೋರಿ ಚೈತ್ರಾ ಕೋರ್ಟ್ ಮೆಟ್ಟಿಲೇರಿದ್ದಳು. ಆದರೆ ಅಲ್ಲಿಗೆ ಬಂದಿದ್ದ ಶಿವಕುಮಾರ್, ಕೋರ್ಟ್ ಆವರಣದಲ್ಲಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ.
ಪುಟ್ಟ ಮಕ್ಕಳಿಗೆ ತಾಯಿ ಇಲ್ಲದಂಗೆ ಮಾಡಿಬಿಟ್ಟ ಎಂದು ಚೈತ್ರಾಳ ಚಿಕ್ಕಮ್ಮ ಆಸ್ಪತ್ರೆಯ ಶವಾಗಾರದ ಬಳಿ ಗೋಳಾಡುತ್ತಿದ್ದರು. ಗಂಡನಿಂದ ವಿಚ್ಚೇದನ ಮತ್ತು ಜೀವನಾಂಶ ಕೋರಿ ಚೈತ್ರಾ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಶನಿವಾರ ಹೊಳೆನರಸೀಪುರ ಕೋರ್ಟ್ಗೆ ಚೈತ್ರಾ ಆಗಮಿಸಿದ್ದರು. ಮಧ್ಯಾಹ್ನ 12.30ರ ಸುಮಾರಿಗೆ ಕೋರ್ಟ್ ಆವರಣದ ಶೌಚಗೃಹಕ್ಕೆ ಚೈತ್ರಾ ತೆರಳಿದ್ದಾಗ ಹೊಂಚುಹಾಕಿ ಕಾಯುತ್ತಿದ್ದ ಶಿವಕುಮಾರ್, ಆಕೆಯ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಚೈತ್ರಾಳನ್ನು ಕೂಡಲೇ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದರೂ ಬದುಕಲಿಲ್ಲ.
ಇತ್ತ ಚೈತ್ರಾಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಗತ್ತಿನ ಪರಿವೆ ಇಲ್ಲದ ಪುಟ್ಟ ಮಕ್ಕಳು ಸಂಬಂಧಿಕರ ಗೋಳಾಟ ನೋಡಿ ಮಂಕಾಗಿದ್ದಾರೆ.
A man murdered his estranged wife inside a court premises in Holenarasipur town on Saturday.
12-08-26 02:58 pm
HK News Staffer
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm