ಬ್ರೇಕಿಂಗ್ ನ್ಯೂಸ್
05-10-20 10:48 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 5: ನಶೆ ಏರಿಸಿಕೊಳ್ಳೋಕೆ ಗಾಂಜಾ ಕಡ್ಡಿಗಳನ್ನು ಬಳಸುವುದನ್ನು ಕೇಳಿದ್ದೇವೆ. ಆದರೆ ಗಾಂಜಾ ಎಣ್ಣೆ ಬಳಕೆ ಬಗ್ಗೆ ಕೇಳಿದ್ದೀರಾ? ನಶೆ ಏರಿಸಿಕೊಳ್ಳಲು ಗಾಂಜಾವನ್ನು ಎಣ್ಣೆ ರೂಪದಲ್ಲಿ ಬಳಸುತ್ತಿರುವ ಪ್ರಕರಣ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ.
ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಸರ್ಕಲ್ ಟಿ.ಡಿ ನಾಗರಾಜ್ ನೇತೃತ್ವದ ತಂಡ ಬಂಧಿತನಿಂದ ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಎಣ್ಣೆಯನ್ನು ವಶಕ್ಕೆ ಪಡೆದಿದೆ. ಬಂಧಿತನನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (25) ಎಂದು ಗುರುತಿಸಲಾಗಿದೆ. ಆತನಿಂದ ಸುಮಾರು 300 ಗ್ರಾಂ ತೂಕದ ಗಾಂಜಾ ಎಣ್ಣೆ, 40 ಗ್ರಾಂ ಮೊಗ್ಗು ಕಾಯಿ ಮಿಶ್ರಿತ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.

ಗಾಂಜಾ ಎಣ್ಣೆ ಅತಿ ಹೆಚ್ಚು ಬೆಲೆಯುಳ್ಳಂಥದ್ದು. ಅರ್ಧ ಕೆಜಿ ಎಣ್ಣೆಗೆ ಒಂದು ಲಕ್ಷಕ್ಕಿಂತ ಹೆಚ್ಚು ಬೆಲೆ ಇದೆ ಎನ್ನುತ್ತಾರೆ ಪೊಲೀಸರು. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಗಾಂಜಾ ಎಣ್ಣೆ ತೆಗೆಯುವ ಜಾಲ ಇದ್ದು ಆರೋಪಿ ಅಬ್ದುಲ್ ಖಾದರ್ ಅಲ್ಲಿಂದ ಗಾಂಜಾ ತರಿಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಗಾಂಜಾವನ್ನು ಎಣ್ಣೆಯ ರೂಪದಲ್ಲಿ ಬಳಕೆ ಮಾಡುವ ಪ್ರಕರಣ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬೆಳಕಿಗೆ ಬಂದಿದೆ. ಉಳಿದಂತೆ ಗಾಂಜಾದಿಂದ ಎಣ್ಣೆ ತೆಗೆಯುವುದು ಅತ್ಯಂತ ದುಬಾರಿ ಮತ್ತು ಅಪರೂಪದ ಪ್ರಕರಣ ಎಂದು ಪೊಲೀಸರು ತಿಳಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm