ಬ್ರೇಕಿಂಗ್ ನ್ಯೂಸ್
05-10-20 12:57 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 5: ಹತ್ರಾಸ್ ಸಾಮೂಹಿಕ ಅತ್ಯಾಚಾರ, ಮಹಿಳೆಯ ಸಾವಿನ ಘಟನೆ ವಿರುದ್ಧ ದೇಶಾದ್ಯಂತ ಆಕ್ರೋಶ ಎದ್ದಿರುವ ನಡುವಲ್ಲೇ 25ರ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ ಮತ್ತೊಂದು ಪ್ರಕರಣ ರಾಜಧಾನಿ ದೆಹಲಿ ಹೊರವಲಯದ ಗುರುಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆಯ ತಲೆಗೆ ತೀವ್ರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿಲ್ಲಿಯಲ್ಲಿ ವಾಸವಿದ್ದ ಈ ಮಹಿಳೆ ರಾತ್ರಿ 1:30ರ ಸುಮಾರಿಗೆ ಸಿಕಂದರಪುರ ಮೆಟ್ರೋ ಸ್ಟೇಷನ್ ಬಳಿ ನಿಂತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತನ ಬೈಕ್ನಲ್ಲಿ ಡಿಎಲ್ಎಫ್ 2ನೇ ಹಂತದಲ್ಲಿದ್ದ ಆತನ ಕಚೇರಿಗೆ ಮಹಿಳೆ ತೆರಳಿದ್ದಾಳೆ. ಕಚೇರಿಗೆ ತಲುಪಿದಾಗ ಆರೋಪಿಯ ಮೂವರು ಸ್ನೇಹಿತರು ಅಲ್ಲಿದ್ದರು. ಹೀಗಾಗಿ ಮುಜುಗರ ಅನುಭವಿಸಿದ ಮಹಿಳೆ ಅಲ್ಲಿಂದ ಹೊರಡಲು ಮುಂದಾಗಿದ್ದು ಆರೋಪಿಗಳು ಬಲವಂತವಾಗಿ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾರೆ. ಮಹಿಳೆಯ ತೀವ್ರ ವಿರೋಧದ ನಡುವೆಯೂ ನಾಲ್ಕು ಮಂದಿ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದರು ಎಂದು ಸಂತ್ರಸ್ತೆಯ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ. ಮಹಿಳೆಗೆ ಹಲ್ಲೆಗೈದು ಗೋಡೆ ಹಾಗೂ ನೆಲಕ್ಕೆ ತಲೆಯನ್ನು ಚಚ್ಚಿದ್ದಾರೆ.
ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸಂತ್ರಸ್ತೆಯನ್ನು ನೋಡಿದ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am