ಬ್ರೇಕಿಂಗ್ ನ್ಯೂಸ್
19-08-22 11:40 am Mangalore Correspondent ಕ್ರೈಂ
ಸುಳ್ಯ , ಆಗಸ್ಟ್ 19 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಹೆಚ್ಚಿನ ತನಿಖೆಗಾಗಿ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಪ್ರಕರಣದ ಆರೋಪಿಗಳಾದ ನೌಫಾಲ್, ಝೈನುಲ್ ಅಬಿದ್, ಮೊಹಮ್ಮದ್ ಸೈಯದ್, ಅಬ್ದುಲ್ ಬಶೀರ್ ಮತ್ತು ರಿಯಾಜ್ ಅವರನ್ನು ಆಗಸ್ಟ್ 23 ರ ವರೆಗೆ ಸುಳ್ಯದ ನ್ಯಾಯಾಲಯ ಎನ್ಐಎ ವಶಕ್ಕೆ ಒಪ್ಪಿಸಿದೆ. ಪ್ರವೀಣ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.
ಪ್ರಕರಣದಲ್ಲಿ ಬಿಜೆಪಿ ಸರಕಾರದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದರಿಂದ ಸ್ಥಳೀಯ ಪೊಲೀಸರು ತೀವ್ರ ಒತ್ತಡಕ್ಕೊಳಗಾಗಿದ್ದರು. ಪ್ರಮುಖ ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರಿಂದ ಪ್ರಕರಣ ಕಗ್ಗಂಟಾಗಿತ್ತು. ಮೊದಲು ಸಂಚು ನಡೆಸಿದ್ದ ಆರು ಮಂದಿಯನ್ನು ಬಂಧಿಸಿದ್ದರೂ, ನೇರ ಶಾಮೀಲಾದವರು ಸಿಕ್ಕಿರಲಿಲ್ಲ. 15 ದಿನಗಳ ನಿರಂತರ ತನಿಖೆಯ ಬಳಿಕ ಕೇರಳದಲ್ಲಿ ಅವಿತುಕೊಂಡಿದ್ದವರು ಸಿಕ್ಕಿಬಿದ್ದಿದ್ದರು. ಕೊನೆಗೆ ಬಂಧಿತರಾಗಿದ್ದ ಶಿಹಾಬುದ್ದೀನ್, ರಿಯಾಜ್ ಮತ್ತು ಬಶೀರ್ ಕೃತ್ಯದಲ್ಲಿ ನೇರ ಭಾಗಿಯಾಗಿದ್ದಲ್ಲದೆ, ಕೊಲೆಗೆ ಪೂರ್ತಿ ಸಂಚನ್ನು ಇವರೇ ಹೆಣೆದಿದ್ದರು ಎನ್ನುವುದು ತನಿಖೆಯಲ್ಲಿ ಕಂಡುಬಂದಿತ್ತು.
ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದರಿಂದ ತನಿಖೆಯ ಹೊಣೆಯನ್ನು ರಾಜ್ಯ ಸರಕಾರ ಎನ್ಐಎಗೆ ವಹಿಸಿತ್ತು. ಪ್ರಕರಣದ ಬಗ್ಗೆ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಎನ್ಐಎ ತನಿಖೆಗೆ ಒತ್ತಾಯ ಮಾಡಿದ್ದರಿಂದ ಪ್ರಕರಣಕ್ಕೆ ಚುರುಕು ಸಿಕ್ಕಿತ್ತು. ಎನ್ಐಎ ಅಧಿಕಾರಿಗಳು ಆರಂಭದಲ್ಲೇ ಪುತ್ತೂರು, ಸುಳ್ಯಕ್ಕೆ ಆಗಮಿಸಿ ತನಿಖೆಗೆ ಕೈಜೋಡಿಸಿದ್ದರು. ಇದೀಗ ಪ್ರಕರಣದ ಒಟ್ಟು ಫೈಲನ್ನು ಸ್ಥಳೀಯ ಪೊಲೀಸರಿಂದ ಪಡೆದುಕೊಂಡಿರುವ ಎನ್ಐಎ ಅಧಿಕಾರಿಗಳು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ಮತ್ತೆ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬೇರೆ ಪ್ರಮುಖರ ಕೈವಾಡ ಕಂಡುಬಂದಲ್ಲಿ ಇನ್ನಷ್ಟು ಮಂದಿಯ ಬಂಧನ ಆಗುವ ಸಾಧ್ಯತೆಯಿದೆ.
Praveen Bellare Murder case, Five persons have been taken to custody by NIA team in Sullia. On July 26, bike-borne miscreants attacked Praveen in the Bellare town of Dakshina Kannada district in front of his chicken shop and hacked him to death.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm