ಬ್ರೇಕಿಂಗ್ ನ್ಯೂಸ್
20-08-22 01:20 pm HK News Desk ಕ್ರೈಂ
Photo credits : Etv Bharath
ಗುಜರಾತ್, ಆಗಸ್ಟ್ 20: ಶಾಲೆಯಲ್ಲಿ ನೀಡಿರುವ ಹೋಮ್ವರ್ಕ್ ಮಾಡಲಿಲ್ಲ ಎಂಬ ಕಾರಣಕ್ಕಾಗಿ ಮಗನ ಮೇಲೆ ನಿವೃತ್ತ ಸೇನಾಧಿಕಾರಿ ಗುಂಡು ಹಾರಿಸಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
ಓದುವ ಬದಲಾಗಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡ್ತಿದ್ದರಿಂದ ರೋಸಿ ಹೋಗಿರುವ ತಂದೆ ಈ ರೀತಿಯಾಗಿ ನಡೆದುಕೊಂಡಿದ್ದಾನೆಂದು ಹೇಳಲಾಗ್ತಿದೆ. ನಿವೃತ್ತ ಸೇನಾಧಿಕಾರಿ ಧರ್ಮೇಂದ್ರ ಓಂಪ್ರಕಾಶ್ ಕಾಮ್ರೇಜ್ವಾವ್ನಲ್ಲಿ ವಾಸವಾಗಿದ್ದಾರೆ. ಇವರ ಮಗ 9ನೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದಾನೆ. ಅಧ್ಯಯನ ಮಾಡುವ ಬದಲು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಕುಳಿತಿದ್ದನು. ಇದರಿಂದ ಮಗನ ಮೇಲೆ ಗದರಿದ್ದಾನೆ. ತಂದೆ ಗದರಿಸಿದ್ದಕ್ಕಾಗಿ ಕೋಪಗೊಂಡಿರುವ ಮಗ ವೈಪರ್ನಿಂದ ಹೊಡೆದಿದ್ದಾನೆ. ಇದರಿಂದ ಆಕ್ರೋಶಗೊಂಡಿರುವ ತಂದೆ ಲೈಸನ್ಸ್ ಆಧಾರಿಕ ರಿವಾಲ್ವರ್ನಿಂದ ಮಗನ ಮೇಲೆ ಗುಂಡು ಹಾರಿಸಿದ್ದಾನೆ. ಹೀಗಾಗಿ, ಆತನ ಬಲಗೈ ಗಾಯಗೊಂಡಿದೆ. ಸದ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂಲತಃ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯವರಾದ ನಿವೃತ್ತ ಸೇನಾಧಿಕಾರಿ ಧರ್ಮೇಂದ್ರ ಓಂಪ್ರಕಾಶ್ ಸದ್ಯ ತಮ್ಮ ಪತ್ನಿ ಸಂಗೀತಾಬೆನ್, ಮಗ ಹಾಗೂ ಮಗಳೊಂದಿಗೆ ಗುಜರಾತ್ನಲ್ಲಿ ವಾಸವಾಗಿದ್ದಾರೆ. ನಿವೃತ್ತ ಸೇನಾಧಿಕಾರಿ ಸದ್ಯ ಸೂರತ್ನಲ್ಲಿ ಪಿಯೂಷ್ಭಾಯ್ ಎಂಬುವವರ ಅಂಗರಕ್ಷಕನಾಗಿ ಕೆಲಸ ಮಾಡ್ತಿದ್ದಾನೆ. ಕಳೆದ ಸೋಮವಾರ ಕೆಲಸ ಮುಗಿಸಿ ರಾತ್ರಿ ಮನೆಗೆ ವಾಪಸ್ ಆಗಿದ್ದಾರೆ. ಈ ವೇಳೆ ಮಗ ಮೊಬೈಲ್ ನೋಡುತ್ತ ಕುಳಿತಿದ್ದನು. ಈ ವಿಚಾರದಲ್ಲಿ ಗದರಿಸಿದ್ದು, ಮೊಬೈಲ್ ಫೋನ್ ಹೆಚ್ಚು ಬಳಸುವ ಬದಲು, ಓದಿನ ಕಡೆ ಗಮನ ಹರಿಸುವಂತೆ ಹೇಳಿದ್ದಾರೆ.
ಪ್ರತಿದಿನ ಅಧ್ಯಯನದ ವಿಚಾರವಾಗಿ ಬೈಯುತ್ತಿದ್ದರಿಂದ ಕೋಪಗೊಂಡ ಮಗ ರಾಜ್ಕುಮಾರ್ ತಂದೆಯ ಮೇಲೆ ವೈಪರ್ನಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಆಕ್ರೋಶಗೊಂಡ ತಂದೆ ಆತನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡಿನ ಶಬ್ದ ಕೇಳಿರುವ ಪಕ್ಕದ ಮನೆಯ ನಿವಾಸಿಗಳು ಅಲ್ಲಿಗೆ ಓಡಿ ಬಂದಿದ್ದಾರೆ. ಜೊತೆಗೆ ಮಧ್ಯಪ್ರವೇಶ ಮಾಡಿರುವ ವ್ಯಕ್ತಿಯೋರ್ವ ಧರ್ಮೇಂದ್ರ ಅವರ ಕೈಯಲ್ಲಿದ್ದ ರಿವಾಲ್ವರ್ ಕಸಿದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಆಯಂಬುಲೆನ್ಸ್ನಲ್ಲಿ ಮಗನನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಾಮ್ರೇಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಧರ್ಮೇಂದ್ರ ವಿರುದ್ಧ ಐಪಿಸಿ ಸೆಕ್ಷನ್ 307 25 (1) ಮತ್ತು 271 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
Ex military man shoots son on his hand for not doing his homework in Gujrath.
12-08-26 06:06 pm
HK Staffer
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm