ಬ್ರೇಕಿಂಗ್ ನ್ಯೂಸ್
20-08-22 03:44 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 20 : ವೃದ್ಧ ಮಹಿಳೆಯನ್ನು ಕೊಂದು ಚಿನ್ನಾಭರಣ ದರೋಡೆಗೈದು ಪರಾರಿಯಾಗಿದ್ದ ಹಂತಕರನ್ನು ನೇಪಾಳ ಗಡಿಯಲ್ಲಿ ಬೆಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 13ರಂದು ಜಯಶ್ರೀ ಎಂಬ ವೃದ್ಧೆಯನ್ನ ಕಟ್ಟಿ ಹಾಕಿ, ಹೊಡೆದು ದರೋಡೆಗೈದ ಘಟನೆ ನಡೆದಿತ್ತು. ವೃದ್ಧೆ ಬಳಿಕ ಸ್ಥಳದಲ್ಲೇ ಸಾವು ಕಂಡಿದ್ದರು. ತನಿಖೆ ನಡೆಸಿದ ಪೊಲೀಸರಿಗೆ ನೇಪಾಳಿಗರ ಗ್ಯಾಂಗ್ ಕೃತ್ಯ ಅನ್ನೋ ಸುಳಿವು ಸಿಕ್ಕಿತ್ತು. ಆರೋಪಿಗಳು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದಾರೆದು ತಿಳಿಯುತ್ತಿದ್ದಂತೆ ಅಲರ್ಟ್ ಆಗಿದ್ದ ಪೊಲೀಸರು ಟವರ್ ಲೊಕೇಶನ್ ಆಧರಿಸಿ ಬೆನ್ನತ್ತಿದ್ದರು. ಎರಡು ಪೊಲೀಸ್ ತಂಡಗಳು ಲೈವ್ ಲೊಕೇಷನ್, ಟೋಲ್ ಸಿಸಿಟಿವಿಗಳ ಮೂಲಕ ಆರೋಪಿಗಳನ್ನ ಬೆನ್ನು ಹತ್ತಿದ್ದವು.
ಉತ್ತರ ಪ್ರದೇಶದ ಲಕ್ನೋಗೆ ತೆರಳಿ, ಆರೋಪಿಗಳು ಅಲ್ಲಿಂದ ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದರು. ಆದ್ರೆ ಅಲ್ಲಿ ತಮ್ಮ ಸಹಚರರು ಬಾರದ ಹಿನ್ನೆಲೆ ಕಾನ್ಪುರದಲ್ಲಿ ಅವಿತುಕೊಂಡಿದ್ದರು. ಆರೋಪಿಗಳು ಕಾನ್ಪುರದಲ್ಲಿ ಉಳಿದುಕೊಂಡಿರುವುದು ಖಚಿತವಾಗುತ್ತಲೇ ಪೊಲೀಸರು ರೌಂಡಪ್ ಮಾಡಿ ಸೆರೆ ಹಿಡಿದಿದ್ದಾರೆ. ಆರೋಪಿಗಳು ಚಿನ್ನಾಭರಣ ಸಹಿತ ಪರಾರಿಯಾಗುತ್ತಿದ್ದಾಗಲೇ ಬಂಧಿಸಿದ್ದು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದಾರೆ.

ಪರಾರಿಯಾಗುತ್ತಿದ್ದ ನೇಪಾಳಿ ಗ್ಯಾಂಗ್ ಬಂಧನಕ್ಕಾಗಿ ಆರು ಮಂದಿ ಇನ್ಸ್ಪೆಕ್ಟರ್ ಗಳನ್ನು ಬಳಸ್ಕೊಂಡು ವಿಶೇಷ ತಂಡವನ್ನು ರಚಿಸಲಾಗಿತ್ತು. ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬಾ, ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಹ್ಮಣೇಶ್ವರ್ ರಾವ್ ಮಾರ್ಗದರ್ಶನದಲ್ಲಿ ಕೊಲೆ ಪ್ರಕರಣವನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ.
ಈ ಬಗ್ಗೆ ಎಸಿಪಿ ಸುಬ್ರಹ್ಮಣ್ಯೇಶ್ವರ ರಾವ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು ಹೆಚ್ ಎಸ್ ಆರ್ ಲೇ ಔಟ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 13 ರಂದು ಮಹಿಳೆಯ ಮರ್ಡರ್ ಆಗಿತ್ತು. ಪೊಲೀಸರು ಕರಾರುವಾಕ್ ಕಾರ್ಯಾಚರಣೆ ನಡೆಸಿ ಆರು ಜನ ನೇಪಾಳ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ. ಇತ್ತಿಚೀನ ದಿನಗಳಲ್ಲಿ ವೃದ್ಧರನ್ನು ಟಾರ್ಗೆಟ್ ಮಾಡಿ ದರೋಡೆ ನಡೆಸುವ ಕೃತ್ಯ ಹೆಚ್ಚುತ್ತಿದೆ. ಆರೋಪಿಗಳು ನೇಪಾಳದ ಪ್ರಜೆಗಳಾಗಿದ್ದು ನಾಲ್ಕು ಜನ ಬೆಂಗಳೂರಿನಲ್ಲಿ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದರು. ಇನ್ನೂ ಇಬ್ಬರನ್ನು ನೇಪಾಳದಿಂದ ಕರೆಸಿಕೊಂಡು ಕೃತ್ಯ ಎಸಗಿದ್ದಾರೆ. ಇನ್ನು ಮುಂದೆ ಬೇರೆ ದೇಶದ ವ್ಯಕ್ತಿಗಳನ್ನು ನೇಮಕ ಮಾಡಿಕೊಳ್ಳುವಾಗ ಹಿನ್ನೆಲೆ ಬಗ್ಗೆ ವೆರಿಫೇಕೆಶನ್ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
Four Nepalis arrested for robbery and murder of old grandmother in Bangalore.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm