ಬ್ರೇಕಿಂಗ್ ನ್ಯೂಸ್
23-08-22 12:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ದೇಶದ್ರೋಹದ ಕೇಸ್ ಜಡಿದಿರುವ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಸೌರಭ್ ಹಾಗೂ ಬೆಂಗಳೂರಿನ ಸಹಕಾರ ನಗರದ ರಾಹುಲ್ ಎಂಬ ಇಬ್ಬರನ್ನು ತನಿಖೆಗೆ ಒಳಪಡಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ನ Karle Infra Pvt. Ltd ಕಂಪನಿಯಲ್ಲಿ ಕೆಲ್ಸ ಮಾಡ್ತಿದ್ದ ಸೌರಭ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ತಮಾಷೆ ಮಾಡೋದಕ್ಕೆ ಹೋಗಿ ಈ ರೀತಿ ಆಯ್ತು ಅಂಥ ಹೇಳಿಕೆ ನೀಡಿದ್ದಾರೆ.

ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಗೆಳೆಯರ ನಡುವೆ ಸವಾಲು ಆಗಿತ್ತು. ಕ್ಲಬ್ ಹೌಸ್ನಲ್ಲಿ ಈ ಬಗ್ಗೆ ವಾರ್ ನಡೆಯುತ್ತಿದ್ದಾಗಲೇ, ಕೆಲ ಯುವಕರು ಸೇರಿ ಹುಚ್ಚಾಟ ಮೆರೆದಿದ್ದರು. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಎಂದು ಹೇಳಿ, ನಾವು ಹೇಳಿದ್ದನ್ನೇ ಮಾಡಿ ತೋರಿಸುತ್ತೇವೆಂದು ಪಾಕ್ ಪರ ಘೋಷಣೆ ಕೂಗಿದ್ದರು. ತಮಾಷೆ ಮಾಡೋಕೆ ಹೋಗಿ ಪಾಕ್ ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಲ್ಲದೆ, ಈಗ ಕಂಬಿ ಎಣಿಸುವಂತಾಗಿದೆ.

ಪ್ರಕರಣ ಸಂಬಂಧ ಇನ್ನೂ ಮೂವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ದೇಶದ್ರೋಹ ವಿಚಾರದಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153ಎ (ಧರ್ಮ, ಬಣ್ಣದ ವಿಚಾರದಲ್ಲಿ ಎತ್ತಿ ಕಟ್ಟುವುದು, ದ್ವೇಷಕ್ಕೆ ಪ್ರಚೋದನೆ) ಅಡಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
Pro Pakistan slogans on club house in Bangalore two techies arrested in Bangalore. Recently a video had gone viral in which Bangalore techies were found shouting pro pak slogans.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 09:08 pm
HK News Desk
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm