ಬ್ರೇಕಿಂಗ್ ನ್ಯೂಸ್
23-08-22 12:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣದಲ್ಲಿ ದೇಶದ್ರೋಹದ ಕೇಸ್ ಜಡಿದಿರುವ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕು ಮಾಡಿದ್ದಾರೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಸೌರಭ್ ಹಾಗೂ ಬೆಂಗಳೂರಿನ ಸಹಕಾರ ನಗರದ ರಾಹುಲ್ ಎಂಬ ಇಬ್ಬರನ್ನು ತನಿಖೆಗೆ ಒಳಪಡಿಸಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ನ Karle Infra Pvt. Ltd ಕಂಪನಿಯಲ್ಲಿ ಕೆಲ್ಸ ಮಾಡ್ತಿದ್ದ ಸೌರಭ್ ಮತ್ತು ಆತನ ಗೆಳೆಯರು ಕೃತ್ಯ ಎಸಗಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ತಪ್ಪೊಪ್ಪಿಕೊಂಡಿದ್ದು ತಮಾಷೆ ಮಾಡೋದಕ್ಕೆ ಹೋಗಿ ಈ ರೀತಿ ಆಯ್ತು ಅಂಥ ಹೇಳಿಕೆ ನೀಡಿದ್ದಾರೆ.

ನಿಮಗೆ ತಾಕತ್ ಇದ್ರೆ ಪಾಕ್ ಪರ ಘೋಷಣೆ ಕೂಗಿ ಎಂದು ಗೆಳೆಯರ ನಡುವೆ ಸವಾಲು ಆಗಿತ್ತು. ಕ್ಲಬ್ ಹೌಸ್ನಲ್ಲಿ ಈ ಬಗ್ಗೆ ವಾರ್ ನಡೆಯುತ್ತಿದ್ದಾಗಲೇ, ಕೆಲ ಯುವಕರು ಸೇರಿ ಹುಚ್ಚಾಟ ಮೆರೆದಿದ್ದರು. ನಮ್ಮ ತಾಕತ್ ಬಗ್ಗೆ ಪ್ರಶ್ನೆ ಮಾಡ್ತೀರಾ ಎಂದು ಹೇಳಿ, ನಾವು ಹೇಳಿದ್ದನ್ನೇ ಮಾಡಿ ತೋರಿಸುತ್ತೇವೆಂದು ಪಾಕ್ ಪರ ಘೋಷಣೆ ಕೂಗಿದ್ದರು. ತಮಾಷೆ ಮಾಡೋಕೆ ಹೋಗಿ ಪಾಕ್ ಪ್ರೇಮಿಗಳಿಗೆ ಸಪೋರ್ಟ್ ಮಾಡಿದ್ದಲ್ಲದೆ, ಈಗ ಕಂಬಿ ಎಣಿಸುವಂತಾಗಿದೆ.

ಪ್ರಕರಣ ಸಂಬಂಧ ಇನ್ನೂ ಮೂವರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಸದ್ಯ ದೇಶದ್ರೋಹ ವಿಚಾರದಲ್ಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 153ಎ (ಧರ್ಮ, ಬಣ್ಣದ ವಿಚಾರದಲ್ಲಿ ಎತ್ತಿ ಕಟ್ಟುವುದು, ದ್ವೇಷಕ್ಕೆ ಪ್ರಚೋದನೆ) ಅಡಿ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ.
Pro Pakistan slogans on club house in Bangalore two techies arrested in Bangalore. Recently a video had gone viral in which Bangalore techies were found shouting pro pak slogans.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 04:16 pm
HK News Staffer
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 05:45 pm
HK News Staffer
ಉಳ್ಳಾಲ ರಸ್ತೆಯಲ್ಲಿ ಫಿಶ್ ಮೀಲ್ ಆಯಿಲ್ ಸೋರಿಕೆ ; ಫ್...
15-05-26 12:21 pm
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm