ಬ್ರೇಕಿಂಗ್ ನ್ಯೂಸ್
25-08-22 12:49 pm HK News Desk ಕ್ರೈಂ
ಬೆಳಗಾವಿ, ಆಗಸ್ಟ್ 25: ಕೆಪಿಟಿಸಿಎಲ್ ಕಿರಿಯ ಸಹಾಯಕ ಅಭಿಯಂತರ ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಬೆಳಗಾವಿ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಹುಕ್ಕೇರಿಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ಪರೀಕ್ಷೆ ಬರೆದ ಅಭ್ಯರ್ಥಿಗಳ ಇಬ್ಬರು ಸಂಬಂಧಿಕರನ್ನು ಬಂಧನ ಮಾಡಲಾಗಿದೆ. ಗದಗದಿಂದ ಬಂದಿದ್ದ ಪ್ರಶ್ನೆಪತ್ರಿಕೆಗೆ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಆದೇಶ ನಾಗನೂರಿ ಸ್ವತಃ ಉತ್ತರ ಬಿಡಿಸಿಕೊಟ್ಟಿದ್ದಾನೆ ಎನ್ನಲಾಗುತ್ತಿದೆ. ಈತ ಹುಕ್ಕೇರಿ ಸರ್ಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡುತ್ತಿದ್ದ. ಬೈಲಹೊಂಗಲ ತಾಲೂಕಿನ ನಾವಲಗಟ್ಟಿಯ ಮಡಿವಾಳಪ್ಪ ತೋರಣಗಟ್ಟಿ ಮತ್ತು ಹೊಸಕೋಟಿ ಗ್ರಾಮದ ಶಂಕರ ಉಣಕಲ್ ಎಂಬಿಬ್ಬರನ್ನೂ ಬಂಧಿಸಲಾಗಿದೆ. KPTCL ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಬಂಧಿತ ಅತಿಥಿ ಉಪನ್ಯಾಸಕನ ಬಳಿಯಿಂದಲೇ ಅಭ್ಯರ್ಥಿಗಳ ಸಂಬಂಧಿಕರಾದ ಮಡಿವಾಳಪ್ಪ ತೋರಣಗಟ್ಟಿ ಮತ್ತು ಶಂಕರ ಉಣಕಲ್ ಬ್ಲೂಟೂಥ್ ಡಿವೈಸ್ ಪಡೆದಿದ್ದರು. ಆದ್ರೆ ಡಿವೈಸ್ಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ. ಬಂಧಿತರಿಂದ ಒಂದು ಕಾರು ಮತ್ತು ಉತ್ತರಗಳಿದ್ದ ಎರಡು ಡಿವೈಸ್ಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣದ ಕಿಂಗ್ ಪಿನ್ ಸಂಜು ಭಂಡಾರಿ ಬಳಿಯಿಂದ ಡಿವೈಸ್ ಪಡೆದು ಅತಿಥಿ ಉಪನ್ಯಾಸಕನೇ ಪರೀಕ್ಷಾರ್ಥಿಗಳ ಸಂಬಂಧಿಕರಿಗೆ ನೀಡಿದ್ದ. ಆರು ಲಕ್ಷ ರೂಪಾಯಿಗೆ ಡೀಲ್ ಫೈನಲ್ ಮಾಡಿ ಬ್ಲ್ಯೂಟೂಥ್ ಡಿವೈಸ್ ಪಡೆದಿದ್ದರು ಎಂದು ತನಿಖೆಯಲ್ಲಿ ಪತ್ತೆಯಾಗಿದೆ. ಬೆಳಗಾವಿ ಎಸ್ಪಿ ಡಾ.ಸಂಜೀವ ಪಾಟೀಲ್ ನೇತೃತ್ವದಲ್ಲಿ ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದ್ದು ತನಿಖೆ ಮುಂದುವರಿದಿದೆ.
The police on Tuesday took three persons into their custody in connection with the alleged malpractice during the recruitment examination held to fill up the posts of junior assistants in KPTCL.
12-08-26 06:57 pm
HK News Staffer
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
ಜೈಲಿನಲ್ಲಿ ವಿಐಪಿ ಖೈದಿಗಳ ಬ್ಯಾರಕ್ ಗೆ ಸಿಸಿಬಿ ದಾಳ...
12-08-26 11:37 am
ಹೋಟೆಲ್ ಅಡುಗೆ ಮನೆಯಲ್ಲೂ ಕ್ಯಾಮೆರಾ ಕಡ್ಡಾಯ ; ಹೊಸ ಕ...
10-08-26 07:54 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 02:08 pm
HK News Staffer
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm