ಬ್ರೇಕಿಂಗ್ ನ್ಯೂಸ್
27-08-22 11:40 am Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 27 : ಪ್ರತಿಷ್ಠಿತ ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ವಿರುದ್ಧ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದೆ.
ಮುರುಘಾ ಮಠದ ವತಿಯಿಂದ ನಡೆಸಲ್ಪಡುವ ವಿದ್ಯಾರ್ಥಿ ನಿಲಯದಲ್ಲಿರುವ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಮಠದ ಸ್ವಾಮೀಜಿ ಮುರುಘಾ ಶರಣರು ಸೇರಿದಂತೆ ಅಲ್ಲಿನ ಆಡಳಿತ ವರ್ಗದ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿಯರಿಗೆ ಜೀವ ಬೆದರಿಕೆ ಇದ್ದ ಕಾರಣ ಕೆಲವು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ಹೇಳಿಕೊಂಡು ಬಂದಿದ್ದರು. ತಮ್ಮನ್ನು ಮಠಕ್ಕೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಮಕ್ಕಳು ಹೇಳಿಕೊಂಡಿದ್ದರು. ಕೂಡಲೇ ಒಡನಾಡಿ ಸಂಸ್ಥೆಯ ಪ್ರತಿನಿಧಿಗಳು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಗಮನಕ್ಕೆ ತಂದಿದ್ದರು.
ಅದರಂತೆ, ಚೈಲ್ಡ್ ಕೇರ್ ಸೆಂಟರಿನವರು ಮೈಸೂರಿನ ಠಾಣೆಯಲ್ಲೇ ದೂರು ನೀಡಿ, ಕೇಸು ದಾಖಲಿಸಿದ್ದಾರೆ. ಪ್ರಕರಣವನ್ನು ಚಿತ್ರದುರ್ಗ ಸ್ಥಳೀಯ ಠಾಣೆಗೆ ವರ್ಗಾಯಿಸುವ ಸಾಧ್ಯತೆಯಿದೆ. ಆದರೆ ಮಕ್ಕಳಿಗೆ ಅಲ್ಲಿ ದೂರು ನೀಡಲು ಭಯವಿದೆ, ಹಾಗಾಗಿ ಇಲ್ಲಿನ ಪೊಲೀಸರೇ ತನಿಖೆ ನಡೆಸಬೇಕು ಎಂದು ಒಡನಾಡಿ ಸಂಸ್ಥೆಯವರು ಹೇಳಿದ್ದರು.
ಮುರುಘಾ ಮಠದ ಇಡೀ ಕರ್ನಾಟಕದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿದ್ದು ಸ್ವಾಮೀಜಿಯನ್ನು ಪರಮಪೂಜ್ಯರು ಎಂದು ನಂಬುವ ಭಕ್ತಗಣ ಇದೆ. ಹೀಗಾಗಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸು ದಾಖಲಾಗಿರುವುದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾದರೆ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿತ ಸ್ವಾಮೀಜಿಯನ್ನು ಬಂಧಿಸುವ ಸಾಧ್ಯತೆಯಿದೆ.
ಎಫ್ಐಆರ್ ಪ್ರಕಾರ, 2019 ಜನವರಿಯಿಂದ 2022ರ ಜೂನ್ ವರೆಗೆ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸತತವಾಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಪ್ರಕರಣದಲ್ಲಿ ಎವನ್ ಆರೋಪಿಯಾಗಿ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿ, ಎರಡನೇ ಆರೋಪಿಯಾಗಿ ಹಾಸ್ಟೆಲ್ ವಾರ್ಡನ್ ರಶ್ಮಿ, ದೌರ್ಜನ್ಯಕ್ಕೆ ಸಹಾಯ ಮಾಡಿದ ಬಸವಾದಿತ್ಯ, ಪರಮಶಿವಯ್ಯ, ಗಂಗಾಧರಯ್ಯ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.
Continuous sexual harassment to the girls in Muruga Math hostel case filed against swamiji in Mysuru. Girls have been sexually assaulted and later have been threatened. Girls have complained that they have been sexually harassed continuously. The child line has taken up the case and the investigation is in progress.
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
25-06-25 11:11 pm
Mangalore Correspondent
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm