ಬ್ರೇಕಿಂಗ್ ನ್ಯೂಸ್
            
                        06-10-20 04:14 pm Headline Karnataka News Network ಕ್ರೈಂ
            ಮಂಡ್ಯ, ಅಕ್ಟೋಬರ್ 06: ಸಾವು ಹೇಗೆ ಬರುತ್ತೆ ಅನ್ನೋಕಾಗಲ್ಲ ಎನ್ನುವುದು ಇದಕ್ಕೇ.. ಆ ಮಗುವಿಗೆ ತಾಯಿ ಊಟ ಕೊಟ್ಟು ಕೈ ತೊಳೆಯಲು ಹೋಗಿದ್ದಳು. ಅಷ್ಟರಲ್ಲಿ ಅಂಬೆಗಾಲಿಡುತ್ತಾ ಮುಂದೆ ಹೋದ ಮೂರು ವರ್ಷದ ಮಗು ಮಹಡಿಯಿಂದ ನೆಲಕ್ಕೆ ಬಿದ್ದು ಸಾವು ಕಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗು ಧನುಶ್ರೀ (3) ದುರಂತ ಸಾವು ಕಂಡಾಕೆ. ಸತೀಶ್ ಅವರದ್ದು ಮಹಡಿಯ ಮನೆಯಾಗಿದ್ದು ಎಂದಿನಂತೆ ಶೃತಿ ಮಗುವನ್ನು ವೆರಾಂಡದಲ್ಲಿ ಆಟವಾಡಿಸಿಕೊಂಡು ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ವರಾಂಡದಲ್ಲಿ ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದರು. ಈ ವೇಳೆ ಮಹಡಿಯ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm