ಬ್ರೇಕಿಂಗ್ ನ್ಯೂಸ್
06-10-20 04:14 pm Headline Karnataka News Network ಕ್ರೈಂ
ಮಂಡ್ಯ, ಅಕ್ಟೋಬರ್ 06: ಸಾವು ಹೇಗೆ ಬರುತ್ತೆ ಅನ್ನೋಕಾಗಲ್ಲ ಎನ್ನುವುದು ಇದಕ್ಕೇ.. ಆ ಮಗುವಿಗೆ ತಾಯಿ ಊಟ ಕೊಟ್ಟು ಕೈ ತೊಳೆಯಲು ಹೋಗಿದ್ದಳು. ಅಷ್ಟರಲ್ಲಿ ಅಂಬೆಗಾಲಿಡುತ್ತಾ ಮುಂದೆ ಹೋದ ಮೂರು ವರ್ಷದ ಮಗು ಮಹಡಿಯಿಂದ ನೆಲಕ್ಕೆ ಬಿದ್ದು ಸಾವು ಕಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗು ಧನುಶ್ರೀ (3) ದುರಂತ ಸಾವು ಕಂಡಾಕೆ. ಸತೀಶ್ ಅವರದ್ದು ಮಹಡಿಯ ಮನೆಯಾಗಿದ್ದು ಎಂದಿನಂತೆ ಶೃತಿ ಮಗುವನ್ನು ವೆರಾಂಡದಲ್ಲಿ ಆಟವಾಡಿಸಿಕೊಂಡು ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ವರಾಂಡದಲ್ಲಿ ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದರು. ಈ ವೇಳೆ ಮಹಡಿಯ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm