ಬ್ರೇಕಿಂಗ್ ನ್ಯೂಸ್
06-10-20 04:14 pm Headline Karnataka News Network ಕ್ರೈಂ
ಮಂಡ್ಯ, ಅಕ್ಟೋಬರ್ 06: ಸಾವು ಹೇಗೆ ಬರುತ್ತೆ ಅನ್ನೋಕಾಗಲ್ಲ ಎನ್ನುವುದು ಇದಕ್ಕೇ.. ಆ ಮಗುವಿಗೆ ತಾಯಿ ಊಟ ಕೊಟ್ಟು ಕೈ ತೊಳೆಯಲು ಹೋಗಿದ್ದಳು. ಅಷ್ಟರಲ್ಲಿ ಅಂಬೆಗಾಲಿಡುತ್ತಾ ಮುಂದೆ ಹೋದ ಮೂರು ವರ್ಷದ ಮಗು ಮಹಡಿಯಿಂದ ನೆಲಕ್ಕೆ ಬಿದ್ದು ಸಾವು ಕಂಡ ಹೃದಯ ವಿದ್ರಾವಕ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗು ಧನುಶ್ರೀ (3) ದುರಂತ ಸಾವು ಕಂಡಾಕೆ. ಸತೀಶ್ ಅವರದ್ದು ಮಹಡಿಯ ಮನೆಯಾಗಿದ್ದು ಎಂದಿನಂತೆ ಶೃತಿ ಮಗುವನ್ನು ವೆರಾಂಡದಲ್ಲಿ ಆಟವಾಡಿಸಿಕೊಂಡು ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ವರಾಂಡದಲ್ಲಿ ಬಿಟ್ಟು ಒಳಗೆ ಕೈ ತೊಳೆಯಲು ಹೋಗಿದ್ದರು. ಈ ವೇಳೆ ಮಹಡಿಯ ಸಂದಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.
ಮಗುವನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm