ಬ್ರೇಕಿಂಗ್ ನ್ಯೂಸ್
28-08-22 05:57 pm Mangalore Correspondent ಕ್ರೈಂ
ಮಂಗಳೂರು, ಆ.28 : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕರಿಯನಂಗಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಂಜಿತ್ ಕುಮಾರ್ ಎಂಬಾತ ಜೈಲು ಶಿಕ್ಷೆಗೊಳಗಾದ ಆರೋಪಿ. ಈತ ಕಿರುಕುಳಕ್ಕೊಳಗಾದ ಬಾಲಕಿಯ ತಾಯಿ ಪಾಲಿಗೆ ಎರಡನೇ ಪತಿಯಾಗಿದ್ದು, 2019 ಮೇ 8ರಂದು ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ಆರೋಪಿಯ ಕೃತ್ಯವನ್ನು ಪ್ರತ್ಯಕ್ಷ ಕಂಡ ಬಾಲಕಿಯ ತಾಯಿ ಪ್ರಶ್ನಿಸಿದಾಗ ರಂಜಿತ್ ಕುಮಾರ್ ಅವಾಚ್ಯ ಶಬ್ದಗಳಿಂದ ಬೈದು ಬೆದರಿಸಿದ್ದ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಬಾಲಕಿ ತಾಯಿ ನೀಡಿದ್ದ ದೂರಿನಂತೆ ರಂಜಿತ್ ಕುಮಾರ್ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿತ್ತು.
ಮೂಡುಬಿದಿರೆ ಪೊಲೀಸ್ ಠಾಣೆಯ ಎಸ್ಸೈ ಸಾವಿತ್ರಿ ನಾಯಕ್ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪೊಕ್ಸೋ ಕಾಯ್ದೆಗೆ ಸಂಬಂಧಿಸಿ 5 ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ, ಅತ್ಯಾಚಾರ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 1000 ರೂ. ದಂಡ, ಭಾ.ದಂ.ಸಂ. ಕಲಂ-504ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1000 ದಂಡ, ಭಾ.ದಂ. ಸಂ. ಕಲಂ 506ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.
Mangalore Sexual harassment on daughter by father, court announces 5 years jail with eight thousand rupees fine.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm