ಬ್ರೇಕಿಂಗ್ ನ್ಯೂಸ್
28-08-22 05:57 pm Mangalore Correspondent ಕ್ರೈಂ
ಮಂಗಳೂರು, ಆ.28 : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಪೋಕ್ಸೋ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕರಿಯನಂಗಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಂಜಿತ್ ಕುಮಾರ್ ಎಂಬಾತ ಜೈಲು ಶಿಕ್ಷೆಗೊಳಗಾದ ಆರೋಪಿ. ಈತ ಕಿರುಕುಳಕ್ಕೊಳಗಾದ ಬಾಲಕಿಯ ತಾಯಿ ಪಾಲಿಗೆ ಎರಡನೇ ಪತಿಯಾಗಿದ್ದು, 2019 ಮೇ 8ರಂದು ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು.
ಆರೋಪಿಯ ಕೃತ್ಯವನ್ನು ಪ್ರತ್ಯಕ್ಷ ಕಂಡ ಬಾಲಕಿಯ ತಾಯಿ ಪ್ರಶ್ನಿಸಿದಾಗ ರಂಜಿತ್ ಕುಮಾರ್ ಅವಾಚ್ಯ ಶಬ್ದಗಳಿಂದ ಬೈದು ಬೆದರಿಸಿದ್ದ. ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಬಾಲಕಿ ತಾಯಿ ನೀಡಿದ್ದ ದೂರಿನಂತೆ ರಂಜಿತ್ ಕುಮಾರ್ ವಿರುದ್ಧ ಪೊಕ್ಸೋ ಪ್ರಕರಣ ದಾಖಲಾಗಿತ್ತು.
ಮೂಡುಬಿದಿರೆ ಪೊಲೀಸ್ ಠಾಣೆಯ ಎಸ್ಸೈ ಸಾವಿತ್ರಿ ನಾಯಕ್ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ ಮತ್ತು 8 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪೊಕ್ಸೋ ಕಾಯ್ದೆಗೆ ಸಂಬಂಧಿಸಿ 5 ವರ್ಷ ಜೈಲು ಶಿಕ್ಷೆ ಮತ್ತು 5000 ರೂ. ದಂಡ, ಅತ್ಯಾಚಾರ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆ ಮತ್ತು 1000 ರೂ. ದಂಡ, ಭಾ.ದಂ.ಸಂ. ಕಲಂ-504ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1000 ದಂಡ, ಭಾ.ದಂ. ಸಂ. ಕಲಂ 506ರ ಆರೋಪಕ್ಕೆ ಸಂಬಂಧಿಸಿ 6 ತಿಂಗಳ ಜೈಲು ಶಿಕ್ಷೆ ಮತ್ತು 1000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ನೊಂದ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ವಾದ ಮಂಡಿಸಿದ್ದರು.
Mangalore Sexual harassment on daughter by father, court announces 5 years jail with eight thousand rupees fine.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm