ಬ್ರೇಕಿಂಗ್ ನ್ಯೂಸ್
30-08-22 06:06 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 30: ಬೆಂಗಳೂರಿನಿಂದ ಕಾರವಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗನ್ನು ಕಳವುಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಸೋಮವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಹೊರಟಿದ್ದ ರೈಲು ಮಧ್ಯರಾತ್ರಿ 2.30ರ ಸುಮಾರಿಗೆ ಪುತ್ತೂರು ರೈಲು ನಿಲ್ದಾಣಕ್ಕೆ ತಲುಪಿತ್ತು. ರೈಲು ಇನ್ನೇನು ಹೊರಡಿ ಸ್ವಲ್ಪ ಮುಂದೆ ಸಾಗುವಷ್ಟರಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಕೈಯಲ್ಲಿದ್ದ ವ್ಯಾನಿಟಿ ಬ್ಯಾಗನ್ನು ಕಿತ್ತುಕೊಂಡು ಓಡಿದ್ದಾನೆ.
ಬೆಂಗಳೂರಿನಲ್ಲಿ ವಾಸವಿರುವ ಕಾರವಾರ ಮೂಲದ ಶಿಕ್ಷಕ ದಂಪತಿ ರಮೇಶ್ ಮತ್ತು ನಿರ್ಮಲಾ ಚಿನ್ನಾಭರಣ ಕಳಕೊಂಡವರು. ನಿರ್ಮಲಾ ಅವರು ತಾನು ಮಲಗಿದ್ದ ತಲೆದಿಂಬಿನ ಅಡಿಯಲ್ಲಿ ಬ್ಯಾಗನ್ನು ಇರಿಸಿಕೊಂಡಿದ್ದರು. ಇದನ್ನು ಮೊದಲೇ ಗಮನಿಸಿದ್ದ ವ್ಯಕ್ತಿಯೊಬ್ಬ ವ್ಯಾನಿಟಿ ಬ್ಯಾಗನ್ನು ಹಿಡಿದೆಳೆದಿದ್ದಾನೆ. ಇಷ್ಟರಲ್ಲಿ ರೈಲು ಪುತ್ತೂರು – ಹಾರಾಡಿ ಬ್ರಿಡ್ಜ್ ದಾಟಿ ಮುಂದೆ ಸಿಟಿ ಗುಡ್ಡೆ ತಲುಪಿತ್ತು. ಮಹಿಳೆ ಗಾಬರಿಗೊಂಡು ಆತನನ್ನು ಬೆನ್ನತ್ತಿದ್ದು ಆಗಂತುಕ ರೈಲಿನಿಂದ ಹೊರಕ್ಕೆ ಹಾರಲು ಯತ್ನಿಸಿದ್ದಾನೆ. ಇದೇ ವೇಳೆ, ಮಹಿಳೆ ಬೊಬ್ಬೆ ಹೊಡೆಯುತ್ತಾ ರೈಲಿನ ಚೈನ್ ಎಳೆದಿದ್ದಾರೆ.
ರೈಲು ನಿಧಾನವಾಗುತ್ತಲೇ ವ್ಯಕ್ತಿ ಹೊರಕ್ಕೆ ಹಾರಿದ್ದು, ಕತ್ತಲೆಯಲ್ಲಿ ಪರಾರಿಯಾಗಿದ್ದಾನೆ. ಇದೇ ಮಹಿಳೆಯೂ ಆತನ ಜೊತೆಗೆ ರೈಲಿನಿಂದ ಹಾರಿದ್ದು, ಹಳಿಯ ಮೇಲೆ ಬಿದ್ದು ಗಾಯಗೊಂಡಿದ್ದಾರೆ. ವ್ಯಕ್ತಿ ಕತ್ತಲಲ್ಲಿ ದೂರಕ್ಕೆ ಓಡಿ ಪರಾರಿಯಾಗಿದ್ದ. ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ದೂರಿನಂತೆ, 40 ಸಾವಿರ ರೂ. ನಗದು ಮತ್ತು ಚಿನ್ನಾಭರಣ ಸೇರಿ ಒಟ್ಟು 8 ಲಕ್ಷ ಮೌಲ್ಯದ ಸೊತ್ತು ಕಳವುಗೈದ ಬಗ್ಗೆ ಮಂಗಳೂರು ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Robbery in mangalore bangalore train, Vanity bag and gold ornaments worth lakhs stolen near Puttur
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm