ಬ್ರೇಕಿಂಗ್ ನ್ಯೂಸ್
            
                        06-10-20 08:34 pm Headline Karnataka News Network ಕ್ರೈಂ
            ಮುಂಬೈ, ಅಕ್ಟೋಬರ್ 6: 22 ವರ್ಷದ ನೇಪಾಳಿ ಯುವತಿಯೊಬ್ಬಳು ಅತ್ಯಾಚಾರ ಆರೋಪಿಯ ವಿರುದ್ಧ ಕೇಸ್ ದಾಖಲಿಸಲು ಲಕ್ನೋದಿಂದ 800 ಕಿಮೀ ದೂರದ ನಾಗ್ಪುರಕ್ಕೆ ಪ್ರಯಾಣಿಸಿರುವ ಘಟನೆ ನಡೆದಿದೆ.
ಸಂತ್ರಸ್ತೆ ಯುವತಿ, ಆರೋಪಿಗೆ ಹೆದರಿ ಲಕ್ನೋದಿಂದ 800 ಕಿ.ಮೀ. ದೂರ ಪ್ರಯಾಣಿಸಿ ನಾಗ್ಪುರದ ಕೊರಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಸಂತ್ರಸ್ತೆ ಯುವತಿ, ಉದ್ಯೋಗಕ್ಕಾಗಿ 2018ರಲ್ಲಿ ನೇಪಾಳದಿಂದ ಭಾರತಕ್ಕೆ ಬಂದಿದ್ದಳು. ಕಳೆದ ಮಾರ್ಚ್ ವರೆಗೂ ಲಕ್ನೋದ ಫೈಜಾಬಾದ್ ರಸ್ತೆಯಲ್ಲಿರುವ ಬಾಡಿಗೆ ಫ್ಲ್ಯಾಟ್ನಲ್ಲಿ ಸ್ನೇಹಿತೆಯ ಜೊತೆಗಿದ್ದಳು. ಸ್ನೇಹಿತೆ ದುಬೈನಲ್ಲಿ ಕೆಲಸ ಮಾಡುತ್ತಿದ್ದ ಲಕ್ನೋ ಮೂಲದ ಆರೋಪಿ ಪ್ರವೀಣ್ ಯಾದವ್ನನ್ನು ವಿಡಿಯೋ ಕಾಲ್ ಮೂಲಕ ಪರಿಚಯಿಸಿದ್ದಳು.
ಈ ನಡುವೆ, ಗೆಳತಿ ಮತ್ತು ಸಂತ್ರಸ್ತ ಯುವತಿ ಜೊತೆ ಹಣದ ವಿಚಾರದಲ್ಲಿ ಜಗಳವಾಗಿತ್ತು. ಈ ಬಗ್ಗೆ ಯುವತಿ, ಪ್ರವೀಣ್ ಯಾದವ್ಗೆ ದೂರು ನೀಡಿದ್ದಳು. ಒಂದೆರಡು ದಿನಗಳ ನಂತರ ಆರೋಪಿ ದುಬೈನಿಂದ ಲಕ್ನೋಗೆ ಬಂದಿದ್ದಾನೆ. ನಂತರ ಹೋಟೆಲ್ವೊಂದರಲ್ಲಿ ಸಂತ್ರಸ್ತೆಯನ್ನು ಭೇಟಿಯಾಗಿದ್ದು ಈ ವೇಳೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಕೃತ್ಯದ ವಿಡಿಯೋ ರೆಕಾರ್ಡ್ ಮಾಡಿದ್ದು, ನಂತರ ಸಂತ್ರಸ್ತೆಯನ್ನು ಬ್ಲಾಕ್ ಮೇಲ್ ಮಾಡಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆಗ ಸಂತ್ರಸ್ತ ಯುವತಿ ಲಕ್ನೋದಿಂದ ತಪ್ಪಿಸಿಕೊಂಡು, ನಾಗ್ಪುರದಲ್ಲಿರುವ ನೇಪಾಳದ ಸ್ನೇಹಿತನೊಬ್ಬನ ಮನೆಗೆ ಬಂದಿದ್ದಾಳೆ. ಇಲ್ಲಿ ಕೊರಡಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ಯಾದವ್ ಮತ್ತು ಲಕ್ನೋ ಮೂಲದ ಸ್ನೇಹಿತೆಯ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು ಪ್ರಕರಣವನ್ನು ಲಕ್ನೋ ಠಾಣೆಗೆ ವರ್ಗಾಯಿಸಲಿದ್ದಾರೆ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm