ಬ್ರೇಕಿಂಗ್ ನ್ಯೂಸ್
03-09-22 02:03 pm HK News Desk ಕ್ರೈಂ
ಭೋಪಾಲ್, ಸೆ.3: ತಾನು ದೊಡ್ಡ ರೌಡಿಯೆಂದು ಪ್ರಸಿದ್ಧಿಗೆ ಬರಬೇಕು, ಕನ್ನಡದ ಸಿನಿಮಾ ಕೆಜಿಎಫ್ ಹೀರೋ ರೀತಿ ಹೈಲೈಟ್ ಆಗಬೇಕೆಂಬ ಹುಚ್ಚು ಆಸೆ ಬೆಳೆಸಿಕೊಂಡ 19 ವರ್ಷ ಯುವಕನೊಬ್ಬ ನಾಲ್ವರು ಸೆಕ್ಯುರಿಟಿ ಗಾರ್ಡ್ಗಳನ್ನು ಕೊಂದು ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಆರೋಪಿ ಶಿವಪ್ರಸಾದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಹಲವರ ಹತ್ಯೆಗೆ ಸ್ಕೆಚ್ ಹಾಕಿದ್ದಾಗಲೇ ಬಲೆಗೆ ಬಿದ್ದಿದ್ದಾನೆ. ಹಂತಕನ ಮುಂದಿನ ಟಾರ್ಗೆಟ್ ಪೊಲೀಸರೇ ಆಗಿದ್ದರು. ಕೆಜಿಎಫ್ ಚಿತ್ರದ ಹೀರೊ ಮಾದರಿಯಲ್ಲಿ ಪ್ರಸಿದ್ಧಿ ಪಡೆಯುವುದಕ್ಕಾಗಿ ಸರಣಿ ಕೊಲೆ ಕೃತ್ಯ ಎಸಗಿದ್ದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಆರೋಪಿ ಶಿವಪ್ರಸಾದ್, ಕೊಲೆಗೈದ ವ್ಯಕ್ತಿಯೊಬ್ಬನಲ್ಲಿದ್ದ ಮೊಬೈಲನ್ನು ಕದ್ದು ತಾನೇ ಬಳಸಿಕೊಂಡಿದ್ದು ಮುಳುವಾಗಿ ಪರಿಣಮಿಸಿತ್ತು. ಕೊಲೆ ಕೇಸಿನಲ್ಲಿ ತನಿಖೆ ಶುರು ಹಚ್ಚಿದ್ದ ಪೊಲೀಸರು ಫೋನ್ ಟ್ರ್ಯಾಕ್ ಮಾಡಿದಾಗ, ಆರೋಪಿಯ ಜಾಡು ಸಿಕ್ಕಿದ್ದು ಬಂಧಿಸಿದ್ದಾರೆ.
ಸೆಕ್ಯುರಿಟಿ ಗಾರ್ಡ್ಗಳು ಮಲಗಿರುತ್ತಿದ್ದಾಗ ಶಿವಪ್ರಸಾದ್ ಅವರನ್ನು ಸುಲಭದಲ್ಲಿ ಹೊಡೆದು ಕೊಲ್ಲುತ್ತಿದ್ದ. ಸಾಗರ್ ಜಿಲ್ಲೆಯಲ್ಲಿ ಮೂವರು, ಭೋಪಾಲ್ನಲ್ಲಿ ಒಬ್ಬನನ್ನು ಇದೇ ರೀತಿ ಹತ್ಯೆ ಮಾಡಿದ್ದಾನೆ. ಈ ಪೈಕಿ ಒಂದು ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರಲ್ಲಿ ಆರೋಪಿಯು ಸೆಕ್ಯುರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ, ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದ. ಆನಂತರ ತನ್ನನ್ನು ಯಾರೂ ನೋಡಿಲ್ಲ ಎಂಬುದನ್ನು ಖಾತ್ರಿ ಪಡಿಸಿ ಪರಾರಿಯಾಗಿದ್ದು ಸಿಸಿಟಿವಿಯಲ್ಲಿ ದಾಖಲಾಗಿತ್ತು.
ಮುಂದಿನ ದಿನಗಳಲ್ಲಿ ಪೊಲೀಸರನ್ನೇ ಹತ್ಯೆ ಮಾಡಲು ಯೋಚಿಸಿದ್ದಾಗಿ ಆರೋಪಿ ಶಿವಪ್ರಸಾದ್ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ. ತಾನು ಪ್ರಸಿದ್ಧಿ ಹೊಂದಬೇಕು ಎಂಬ ಒಂದೇ ಕಾರಣಕ್ಕೆ ರಾತ್ರಿ ಹೊತ್ತು ನಿದ್ರೆ ಮಂಪರಿನಲ್ಲಿರುತ್ತಿದ್ದ ಸೆಕ್ಯುರಿಟಿ ಗಾರ್ಡ್ಗಳನ್ನ ಕಲ್ಲು, ಕಬ್ಬಿಣದ ರಾಡ್, ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡುತ್ತಿದ್ದ. ಯಾರೊಬ್ಬರನ್ನೂ ಲೂಟಿ ಮಾಡಿಲ್ಲ. ಅವನ ಉದ್ದೇಶ ಕೊಲೆ ಮಾಡುವುದಷ್ಟೇ ಆಗಿತ್ತು. ನಾಲ್ಕು ಕೊಲೆಯಾದ್ರೂ ಹೆಸರು ಬಂದಿಲ್ಲ ಅಂತ ಮುಂದಿನ ಟಾರ್ಗೆಟ್ ಪೊಲೀಸರನ್ನೇ ಮಾಡಿದ್ದ ಎಂದು ಪೊಲೀಸರು ಹೇಳಿದ್ದಾರೆ.
On Friday, the Madhya Pradesh Police arrested a 19-year-old alleged serial killer for reportedly murdering four security guards in their sleep. According to NDTV, the accused, Shivprasad Dhurve, was inspired by the Kannada blockbuster film KGF and wanted to become famous.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 08:37 pm
HK News Staffer
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
22-03-26 07:30 pm
HK News Staffer
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
22-03-26 09:44 pm
HK News Staffer
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm