ಬ್ರೇಕಿಂಗ್ ನ್ಯೂಸ್
07-10-20 11:59 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 07: ನಿಂತಿದ್ದ ಟಿಪ್ಪರ್ ಲಾರಿಗೆ ಆಟೋ ರಿಕ್ಷಾ ಡಿಕ್ಕಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ.
ಪಡೀಲ್ - ಮರೋಳಿ ಹೆದ್ದಾರಿಯ ಹಳೆ ಕಂಕನಾಡಿ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಟಿಪ್ಪರ್ ಲಾರಿಗೆ ನಂತೂರು ಕಡೆಯಿಂದ ವೇಗವಾಗಿ ಬಂದ ಆಟೋ ಡಿಕ್ಕಿಯಾಗಿದೆ. ಅಡ್ಯಾರ್ ನಿವಾಸಿ, ಆಟೋ ಚಾಲಕ ಸಲೀಂ(35) ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಬೆಳ್ಳಂಬೆಳಗ್ಗೆ ಹೆದ್ದಾರಿ ಖಾಲಿ ಇದೆಯೆಂದು ಆಟೋ ಚಾಲಕ ವೇಗವಾಗಿ ಧಾವಿಸಿ ಬಂದಿದ್ದೇ ಘಟನೆಗೆ ಕಾರಣ ಎನ್ನಲಾಗ್ತಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ರಿಕ್ಷಾದಲ್ಲಿ ಮಲ್ಪೆಗೆ ತೆರಳಿ ಮೀನು ಹಿಡಿದು ತರುತ್ತಿದ್ದರು ಎನ್ನಲಾಗಿದೆ.



ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಸೀಜ್ ಆಗಿದ್ದ ಟಿಪ್ಪರ್ ಲಾರಿಯನ್ನು ಪೊಲೀಸರು ರಸ್ತೆ ಬದಿ ನಿಲ್ಲಿಸಿದ್ದರು. ಹತ್ತು ವರ್ಷಗಳ ಹಿಂದೆ ಕಗ್ಗಲ್ಲು ಸಹಿತ ಲಾರಿಯನ್ನು ಜಪ್ತಿ ಮಾಡಿದ್ದು ಹಲವು ವರ್ಷಗಳಿಂದ ರಸ್ತೆ ಬದಿಯಲ್ಲೇ ಪೊಲೀಸರು ಲಾರಿಯನ್ನು ನಿಲ್ಲಿಸಿದ್ದರು. ಹೆದ್ದಾರಿ ಬದಿಯಲ್ಲಿ ಲಾರಿಯನ್ನು ಹೀಗೆ ನಿಲ್ಲಿಸುವಂತಿಲ್ಲ. ಪೊಲೀಸರ ನಿರ್ಲಕ್ಷ್ಯಕ್ಕೆ ಈಗ ಅಮಾಯಕ ಯುವಕ ಬಲಿಯಾಗಿದ್ದಾನೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm